ದೇಶ- ವಿದೇಶ

ಭಾರತಕ್ಕೆ ಅಮೇರಿಕಾದ ಹೊಸ ರಾಯಭಾರಿಯಾಗಿ ಸೆರ್ಗಿಯೋ ಗೋರ್‌ ನೇಮಕ

ವಾಷಿಂಗ್ಟನ್– ಅಚ್ಚರಿಯ ಬೆಳವಣಿಗೆ ಎಂಬಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿಯಾದ ಸೆರ್ಗಿಯೊ ಗೋರ್ ಅವರನ್ನು ಅಮೆರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಭಾರತದೊಂದಿಗೆ ಅಮೆರಿಕ ಸಂಬಂಧ ಸೂಕ್ಷ್ಮ ಹಂತದಲ್ಲಿರುವಾಗ ಟ್ರಂಪ್ ತಮ್ಮ ಅತ್ಯಂತ ನಂಬಿಕಸ್ಥ ಅಧಿಕಾರಿಯನ್ನು ಈ ಮಹತ್ವದ ಹುದ್ದೆಗೆ ಆಯ್ಕೆ ಮಾಡಿದ್ದಾರೆ.

ಗೋರ್ ಅವರನ್ನು ಭಾರತ ರಾಯಭಾರಿ ಮಾತ್ರವಲ್ಲದೇ ದಕ್ಷಿಣ ಮತ್ತು ಮಧ್ಯ ಏಷ್ಯಾಕ್ಕೆ ವಿಶೇಷ ರಾಯಭಾರಿಯಾಗಿಯೂ ಟ್ರಂಪ್ ನೇಮಿಸಿದ್ದಾರೆ.

ಈ ಕುರಿತು ತಮ್ಮ ಟ್ರೂತ್ ಸೋಶಿಯಲ್ ವೇದಿಕೆಯಲ್ಲಿ ಪ್ರಕಟಿಸಿರುವ ಡೊನಾಲ್ಡ್ ಟ್ರಂಪ್ ಅವರು, ವಿಶ್ವದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ನನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಮತ್ತು ಅಮೆರಿಕವನ್ನು ಮತ್ತೆ ಶ್ರೇಷ್ಠವಾಗಿಸಲು ನಾನು ಸಂಪೂರ್ಣವಾಗಿ ವಿಶ್ವಾಸ ಇಡಬಹುದಾದ ವ್ಯಕ್ತಿ ಇರುವುದು ಮುಖ್ಯ.

ಆದ್ದರಿಂದ ಸೆರ್ಗಿಯೊ ಗೋರ್ ಅವರನ್ನು ಭಾರತದ ರಾಯಭಾರಿಯಾಗಿ ನೇಮಿಸುತ್ತಿದ್ದು, ಗೋರ್ ಅವರನ್ನು ಭಾರತ ಗಣರಾಜ್ಯಕ್ಕೆ ನಮ್ಮ ಮುಂದಿನ ಅಮೆರಿಕದ ರಾಯಭಾರಿಯಾಗಿ ಬಡ್ತಿ ನೀಡುತ್ತಿದ್ದೇನೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ಅವರು ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳಿಗೆ ವಿಶೇಷ ರಾಯಭಾರಿಯಾಗಿಯೂ ಸೇವೆ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

6 mins ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

47 mins ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

54 mins ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

1 hour ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

2 hours ago

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

2 hours ago