ಮುಂಬೈ: ಬೈಕ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಟಿವಿ ಸೀರಿಯಲ್ ನಟ ಅಮನ್ ಜೈಸ್ವಾಲ್ ಸಾವನ್ನಪ್ಪಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ.
ನಟ ಅಮನ್ ಅವರು ಧರ್ತಿಪುತ್ರ ನಂದಿನಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಕ್ಕೆ ಹೆಸರುವಾಸಿಯಾಗಿದ್ದರು.
ಅಪಘಾತದ ಬಳಿಕ ತೀವ್ರ ಗಾಯಗೊಂಡಿದ್ದ ಅಮನ್ ಜೈಸ್ವಾಲ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಅಂಬೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟ್ರಕ್ ಚಾಲಕನ ವಿರುದ್ಧ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.
ಅಮನ್ ಜೈಸ್ವಾಲ್ ನಿಧನಕ್ಕೆ ಸೀರಿಯಲ್ ಹಾಗೂ ಚಲನಚಿತ್ರ ನಟರು ಕಂಬನಿ ಮಿಡಿದಿದ್ದಾರೆ.
ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ…
ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್ಲೈನ್ ಗೇಮ್ಗಳನ್ನು ನಿಷೇಧಿಸಬೇಕು ಎಂದು…
ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್…
ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ.…
ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ,…
ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ…