ದೇಶ- ವಿದೇಶ

ಬಿಹಾರ ಚುನಾವಣೆಯಲ್ಲಿ ಹಿನ್ನಡೆ : ಸಿಎಂ ಸಿದ್ದರಾಮಯ್ಯ ಹೇಳೋದೇನು?

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇತ್ತ ಆರ್‌ಜೆಡಿ-ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ ಹಿನ್ನೆಡೆಯಾಗಿದೆ.

ಸದ್ಯ ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದರು.

ಇನ್ನೂ ಮಕ್ಕಳ ದಿನಾಚರಣೆ ಬಗ್ಗೆ ಮಾತನಾಡಿ, ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು ಎಂದು ಅರ್ಥೈಸಿಕೊಂಡಿದ್ದರು. ಆದ್ದರಿಂದ ಚಾಚಾ ನೆಹರೂ ಎಂದೇ ಅವರನ್ನು ಕರೆಯಲಾಗುತ್ತಿತ್ತು ಎಂದರು.

ಇದನ್ನು ಓದಿ: Bihar Result : ಭರ್ಜರಿ ಗೆಲುವಿನತ್ತ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌

ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ದೇಶ ಪ್ರೇಮ ಹಾಗೂ ಸ್ವಾತಂತ್ರ್ಯ ಪ್ರೇಮಗಳನ್ನು ಬೆಳೆಸಿಕೊಂಡಿದ್ದರು. ಬ್ರಿಟಿಷರ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಂಡು ಮಹಾತ್ಮ ಗಾಂಧಿಯವರ ನೆಚ್ಚಿನ ಶಿಷ್ಯರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುತ್ತಾರೆ. ಸುಮಾರು 9 ವರ್ಷಗಳ ಕಾಲ ಕಾರಾಗೃಹದಲ್ಲಿದ್ದು ದೇಶಕ್ಕಾಗಿ ಬಹಳಷ್ಟು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಾಗ ದೇಶದ ಬಜೆಟ್ ಗಾತ್ರ 197 ಕೋಟಿ ರೂ. ಗಳು ಮಾತ್ರ ಇತ್ತು. ಎರಡು ಮೂರು ವರ್ಷಗಳ ನಂತರ 4 ಅಂಕಿಗಳ ಹಂತಕ್ಕೆ ತಲುಪಿತು ಎಂದರು.

ಬಿಜೆಪಿಗೆ ಗಾಂಧಿ ಹಾಗೂ ನೆಹರೂ ಅವರನ್ನು ತೆಗಳುವುದೇ ಕೆಲಸ. ಬಿಜೆಪಿಗೆ ಗಾಂಧಿ ಹಾಗೂ ನೆಹರೂ ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್.ಎಸ್.ಎಸ್ ಗಾಂಧಿ ಮತ್ತು ನೆಹರೂ ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ ಎಂದರು.

ಬಾಗಲಕೋಟೆಯಲ್ಲಿ ಕಬ್ಬಿಗೆ ಬೆಂಕಿ ಪ್ರಕರಣ : ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ
ಬಾಗಲಕೋಟೆ ಕಬ್ಬು ಬೆಳೆಗಾರರು ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿ ರೈತರು ಅದಕ್ಕೆ ಕಾರಣರಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರ 3300 ರೂ.ಗಳ ದರ ನಿಗದಿ ಮಾಡಿದ್ದು, ಮುಧೋಳದ ರೈತರು ಅದಕ್ಕೆ ಒಪ್ಪಿಗೆ ನೀಡಿ ಚಳವಳಿಯನ್ನು ವಾಪಸ್ಸು ಪಡೆಯಬೇಕು ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

13 mins ago

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

1 hour ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

3 hours ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

3 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

3 hours ago