ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 9ನೇ ಆಡಳಿತ ಸಮಿತಿ ಸಭೆ ಶನಿವಾರ ರಾಷ್ಟ್ರಪತಿ ಭವನದಲ್ಲಿ ನಡೆದಿದೆ. 2047ರ ಹೊತ್ತಿಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಅಜೆಂಡಾವನ್ನು ಸಭೆ ಹೊಂದಿದೆ.
ಈ ಸಭೆಗೆ ಕರ್ನಾಟಕ ಸೇರಿ ಹಲವು ರಾಜ್ಯಗಳು ಬಹಿಷ್ಕಾರ ಹಾಕಿವೆ. ಈ ನಡುವೆ ಇಂಡಿಯಾ ಮೈತ್ರಿಕೂಟದ ಭಾಗವಾಗಿ ಸಭೆಗೆ ಹಾಜರಾದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನನಗೆ ಸಭೆಯಲ್ಲಿ ಮಾತನಾಡಲು ಸಮಯಾವಕಾಶ ನೀಡಲಿಲ್ಲ, ನನ್ನ ಮೈಕ್ ಅನ್ನು ಆಫ್ ಮಾಡಲಾಯಿತು ಎಂದು ಆರೋಪಿಸಿ ಸಭೆಯಿಂದ ಅರ್ಧಕ್ಕೆ ಸಿಟ್ಟಿನಿಂದ ಹೊರ ನಡೆದಿದ್ದಾರೆ.
ಇನ್ನೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಈ ಸಭೆಗೆ ಭಾಗವಹಿಸಲಿಲ್ಲ. ಬದಲಿಗೆ ಅವರ ಪ್ರತಿನಿಧಿಯಾದ ಡಿಸಿಎಂ ಸಾಮ್ರಾಟ್ ಚೌಧುರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಭಾಗವಹಿಸಿದ್ದರು. ದೆಹಲಿ ಸಿಎಂ ಕೇಜ್ರಿವಾಲ್ ಜೈಲಿನಲ್ಲಿದ್ದರೂ ಅವರ ಯಾವ ಪ್ರತಿನಿಧಿಯೂ ಸಭೆಯಲ್ಲಿ ಭಾಗವಹಿಸಲಿಲ್ಲ.
ನೀತಿ ಆಯೋಗದ ಸಭೆಗೆ ಬಜೆಟ್ನಲ್ಲಿನ ತಾರತಮ್ಯ ವಿರೋಧೀಸಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್, ಹಿಮಾಚಲ ಪ್ರದೇಶದ ಸಿಎಂ ಸುಖವಿಂದರ್ ಸಿಂಗ್ ಸುಖು, ಜಾರ್ಖಂಡ್ ಸಿಎಂ ಹೇಮಂತ್ ಸೂರೆನ್, ಕೇರಳದ ಸಿಎಂ ಪಿಣರಾಯ ವಿಜಯನ್ ಗೈರಾಗಿದ್ದಾರೆ.
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…