ಬಿಹಾರ: ಶ್ರಾವಣ ಸೋಮವಾರ ಪ್ರಯುಕ್ತ ಬರಾವರ್ ಬೆಟ್ಟದ ಬಾಬಾ ಸಿದ್ದಾಂತ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಮಂದಿ ಮರಣ ಹೊಂದಿದ್ದು, 50ಕ್ಕೂ ಅಧಿಕ ಮಂದಿಗೆ ಗಾಯಕಗಳಾಗಿವೆ.
ಇಲ್ಲಿನ ಕನ್ವಾರಿಗಳ ನಡುವೆ ಇಲ್ಲದ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಇದನ್ನು ಚದುರಿಸಲು ಪೊಲೀಸರು ಲಘು ಲಾಠಿಚಾರ್ಜ್ ನಡೆಸಿದ್ದಾರೆ. ಈ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ.
ಹಲವು ವಿಷಯಗಳ ಬಗ್ಗೆ ಕನ್ವಾರಿಗಳ ನಡುವೆ ವಾಗ್ವಾದ ಉಂಟಾಗಿದೆ. ಈ ವಾಗ್ವಾದ ಪ್ರಬಲವಾಗಿ ಬೆಳೆದು ಹೊಡೆದಾಟಕ್ಕೆ ತಿರುಗಿದೆ. ಇದನ್ನು ಚುದುರಿಸಲು ಮುಂದಾದ ಪೊಲೀಸರು ಲಾಠಿ ಬೀಸಿದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪ್ರತಿವರ್ಷ ಶ್ರಾವಣ ಮಾಸದಲ್ಲಿ ಇಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ನಡೆಯುತ್ತದೆ. ಅದರಂತೆ ಭಾನುವಾರ ರಾತ್ರಿ 11ರ ಸುಮಾರಿಗೆ ಇಲ್ಲಿನ ನಡೆದ ಗಲಾಟೆ ಕೂಪಕ್ಕೆ ತಿರುಗಿ ಕಾಲ್ತುಳಿತ ಉಂಟಾಗಿದ್ದು, ಸಾವು ನೋವು ಸಂಭವಿಸಿದೆ.
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…