ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಮುಂಜಾನೆ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.
ಇಂದು ಮುಂಜಾನೆ 5.30ರ ವೇಳೆಗೆ ಚಲ್ಪಾಕ ಅರಣ್ಯದಲ್ಲಿ ಮಾವೋವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಕೂಂಬಿಂಗ್ ಕಾರ್ಯಾಚರಣೆ ವೇಳೆ ಮಾವೋವಾದಿ ಗುಂಪನ್ನು ಗುರುತಿಸಿ ಶರಣಾಗುವಂತೆ ಆದೇಶ ನೀಡಲಾಗಿತ್ತು.
ಆದರೆ ಮಾವೋವಾದಿಗಳು ಇದ್ಯಾವುದಕ್ಕೂ ಜಗ್ಗದೇ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರು.
ಇದಕ್ಕೆ ಪ್ರತಿಯಾಗಿ ಪೊಲೀಸರು ಕೂಡ ಗುಂಡಿನ ಸುರಿಮಳೆ ಸುರಿಸಿ 7 ಮಂದಿ ಮಾವೋವಾದಿಗಳನ್ನು ಹತ್ಯೆ ಗೈದಿದ್ದಾರೆ.
ಘಟನಾ ಸ್ಥಳದಲ್ಲಿ ಅನೇಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಎರಡು ಎಕೆ 47 ರೈಫಲ್ಗಳು ಸೇರಿವೆ ಎಂಬ ಮಾಹಿತಿ ಲಭ್ಯವಾಗಿದೆ.
ನವೆಂಬರ್.21ರಂದು ಪೊಲೀಸ್ ಮಾಹಿತಿದಾರರೆಂದು ಶಂಕಿಸಿ ಮಾವೋವಾದಿಗಳು ಇಬ್ಬರು ಬುಡಕಟ್ಟು ಜನರನ್ನು ಹತ್ಯೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ತೆಲಂಗಾಣ ಹಾಗೂ ನಕ್ಸಲ್ ವಿರೋಧಿ ಪಡೆಗಳು ಜಂಟಿಯಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಏಳು ಮಂದಿ ಮಾವೋವಾದಿಗಳನ್ನು ಎನ್ಕೌಂಟರ್ ಮಾಡಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…