ಹೊಸದಿಲ್ಲಿ: ದೆಹಲಿ ಪೊಲೀಸರ ಕಾರ್ಯಾಚರಣೆಯಿಂದ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್ನ ಏಳು ಮಂದಿ ಶಂಕಿತ ಶೂಟರ್ಗಳ ಬಂಧನವಾಗಿದೆ.
ಈ ಬಗ್ಗೆ ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಮುಂಬೈನಲ್ಲಿ ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಅವರನ್ನು ಅಕ್ಟೋಬರ್ 12 ರಂದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದೀಕಿ ಹತ್ಯೆಯ ಹೊಣೆ ಹೊತ್ತು, ಬಿಷ್ಟೋಯಿ ಗ್ಯಾಂಗ್ನ ಸದಸ್ಯ ಎನ್ನಲಾದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಘಟನೆ ನಡೆದು ಹಲವು ದಿನಗಳ ನಂತರ ಮಹತ್ತರ ಬೆಳವಣಿಗೆಯನ್ನು ಕಂಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಹಾಗೂ ಇತರ ರಾಜ್ಯಗಳಿಂದ ಏಳು ಮಂದಿಯನ್ನು ಬಂಧಿಸಲಾಗಿದೆ. ಈ ಬಂಧಿತ ಆರೋಪಿಗಳಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಒಳಪಡಿಸಲಾಗಿದ್ದು, ಸಿದ್ದಿಕಿ ಹತ್ಯೆಗೂ ಈ ಆರೋಪಿಗಳಿಗೂ ಏನಾದರೂ ಸಂಬಂಧವಿದೆಯಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…