ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆದಿದೆ. ಈ ವೇಳೆ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
ದ್ವಿಪಕ್ಷೀಯ ಮಾತುಕತೆ ವೇಳೆ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಇದನ್ನು ಓದಿ: ವಾಚ್ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್
ಈ ವೇಳೆ ಮಾತನಾಡಿದ ರಷ್ಯಾ ಅಧ್ಯಕ್ಷ ಪುಟಿನ್, ಭಾರತ ನೀಡಿದ ಆತಿಥ್ಯಕ್ಕೆ ಸಂತಸವಾಗಿದೆ. ಉಭಯ ದೇಶಗಳ ನಡುವೆ ಆರ್ಥಿಕ ಅಭಿವೃದ್ಧೊ ಮತ್ತಷ್ಟು ಸಮೃದ್ಧಿಯಾಗಲಿದೆ. ಆರ್ಥಿಕತೆ, ವಾಣಿಜ್ಯ, ರಕ್ಷಣೆ ವಿಚಾರವಾಗಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದೇವೆ. 2030ರವರೆಗೆ ಹಲವು ಯೋಜನೆಗಳಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ಭಾರ-ರಷ್ಯಾ ನಡುವಿನ ನೀತಿ ಸಮೃದ್ಧಪಡಿಸಲು ಈ ಭೇಟಿ ಪೂರಕವಾಗಿದೆ. ರಷ್ಯಾ ನಾಗರಿಕರಿಗೆ 30 ದಿನಗಳವರೆಗೆ ಉಚಿತ ಇ-ವೀಸಾ ಸೌಲಭ್ಯ ನೀಡುವುದಾಗಿ ಭಾರತ ಒಪ್ಪಿದೆ. ರಷ್ಯಾ ನಾಗರಿಕರಿಗೆ ಗ್ರೂಪ್ ಟೂರಿಸ್ಟ್ ಇ-ವೀಸಾ ನೀಡಲು ನಿರ್ಧರಿಸಲಾಗಿದೆ. ಹೊಸಾಗಿ ಎರಡು ರಾಯಭಾರ ಕಚೇರಿಗಳನ್ನು ತೆರೆಯಲಾಗುವುದು. ಯಾವುದೇ ಅಡೆತಡೆ ಇಲ್ಲದೇ ಭಾರತಕ್ಕೆ ಇಂಧನ ಪೂರೈಕೆ ಮುಂದುವರೆಸಲಾಗುತ್ತದೆ. ರಷ್ಯಾ ಹಾಗೂ ಭಾರತ ಸ್ವತಂತ್ರವಾಗಿ ವಿದೇಶಾಂಗ ನೀತಿಗಳನ್ನು ಹೊಂದಿರಲಿದೆ ಎಂದು ಹೇಳಿದರು.
ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…