ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆದಿದೆ. ಈ ವೇಳೆ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
ದ್ವಿಪಕ್ಷೀಯ ಮಾತುಕತೆ ವೇಳೆ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಇದನ್ನು ಓದಿ: ವಾಚ್ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್
ಈ ವೇಳೆ ಮಾತನಾಡಿದ ರಷ್ಯಾ ಅಧ್ಯಕ್ಷ ಪುಟಿನ್, ಭಾರತ ನೀಡಿದ ಆತಿಥ್ಯಕ್ಕೆ ಸಂತಸವಾಗಿದೆ. ಉಭಯ ದೇಶಗಳ ನಡುವೆ ಆರ್ಥಿಕ ಅಭಿವೃದ್ಧೊ ಮತ್ತಷ್ಟು ಸಮೃದ್ಧಿಯಾಗಲಿದೆ. ಆರ್ಥಿಕತೆ, ವಾಣಿಜ್ಯ, ರಕ್ಷಣೆ ವಿಚಾರವಾಗಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದೇವೆ. 2030ರವರೆಗೆ ಹಲವು ಯೋಜನೆಗಳಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ಭಾರ-ರಷ್ಯಾ ನಡುವಿನ ನೀತಿ ಸಮೃದ್ಧಪಡಿಸಲು ಈ ಭೇಟಿ ಪೂರಕವಾಗಿದೆ. ರಷ್ಯಾ ನಾಗರಿಕರಿಗೆ 30 ದಿನಗಳವರೆಗೆ ಉಚಿತ ಇ-ವೀಸಾ ಸೌಲಭ್ಯ ನೀಡುವುದಾಗಿ ಭಾರತ ಒಪ್ಪಿದೆ. ರಷ್ಯಾ ನಾಗರಿಕರಿಗೆ ಗ್ರೂಪ್ ಟೂರಿಸ್ಟ್ ಇ-ವೀಸಾ ನೀಡಲು ನಿರ್ಧರಿಸಲಾಗಿದೆ. ಹೊಸಾಗಿ ಎರಡು ರಾಯಭಾರ ಕಚೇರಿಗಳನ್ನು ತೆರೆಯಲಾಗುವುದು. ಯಾವುದೇ ಅಡೆತಡೆ ಇಲ್ಲದೇ ಭಾರತಕ್ಕೆ ಇಂಧನ ಪೂರೈಕೆ ಮುಂದುವರೆಸಲಾಗುತ್ತದೆ. ರಷ್ಯಾ ಹಾಗೂ ಭಾರತ ಸ್ವತಂತ್ರವಾಗಿ ವಿದೇಶಾಂಗ ನೀತಿಗಳನ್ನು ಹೊಂದಿರಲಿದೆ ಎಂದು ಹೇಳಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…