ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆದಿದೆ. ಈ ವೇಳೆ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
ದ್ವಿಪಕ್ಷೀಯ ಮಾತುಕತೆ ವೇಳೆ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಇದನ್ನು ಓದಿ: ವಾಚ್ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್
ಈ ವೇಳೆ ಮಾತನಾಡಿದ ರಷ್ಯಾ ಅಧ್ಯಕ್ಷ ಪುಟಿನ್, ಭಾರತ ನೀಡಿದ ಆತಿಥ್ಯಕ್ಕೆ ಸಂತಸವಾಗಿದೆ. ಉಭಯ ದೇಶಗಳ ನಡುವೆ ಆರ್ಥಿಕ ಅಭಿವೃದ್ಧೊ ಮತ್ತಷ್ಟು ಸಮೃದ್ಧಿಯಾಗಲಿದೆ. ಆರ್ಥಿಕತೆ, ವಾಣಿಜ್ಯ, ರಕ್ಷಣೆ ವಿಚಾರವಾಗಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದೇವೆ. 2030ರವರೆಗೆ ಹಲವು ಯೋಜನೆಗಳಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ಭಾರ-ರಷ್ಯಾ ನಡುವಿನ ನೀತಿ ಸಮೃದ್ಧಪಡಿಸಲು ಈ ಭೇಟಿ ಪೂರಕವಾಗಿದೆ. ರಷ್ಯಾ ನಾಗರಿಕರಿಗೆ 30 ದಿನಗಳವರೆಗೆ ಉಚಿತ ಇ-ವೀಸಾ ಸೌಲಭ್ಯ ನೀಡುವುದಾಗಿ ಭಾರತ ಒಪ್ಪಿದೆ. ರಷ್ಯಾ ನಾಗರಿಕರಿಗೆ ಗ್ರೂಪ್ ಟೂರಿಸ್ಟ್ ಇ-ವೀಸಾ ನೀಡಲು ನಿರ್ಧರಿಸಲಾಗಿದೆ. ಹೊಸಾಗಿ ಎರಡು ರಾಯಭಾರ ಕಚೇರಿಗಳನ್ನು ತೆರೆಯಲಾಗುವುದು. ಯಾವುದೇ ಅಡೆತಡೆ ಇಲ್ಲದೇ ಭಾರತಕ್ಕೆ ಇಂಧನ ಪೂರೈಕೆ ಮುಂದುವರೆಸಲಾಗುತ್ತದೆ. ರಷ್ಯಾ ಹಾಗೂ ಭಾರತ ಸ್ವತಂತ್ರವಾಗಿ ವಿದೇಶಾಂಗ ನೀತಿಗಳನ್ನು ಹೊಂದಿರಲಿದೆ ಎಂದು ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…