pakisthan
ಬುನೇರ್(ಪಾಕಿಸ್ತಾನ): ವಾಯುವ್ಯ ಪಾಕಿಸ್ತಾನದ ಬುನೇರ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹಕ್ಕೆ 300ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ.
ರಕ್ಷಣಾ ಕಾರ್ಯಕರ್ತರು ತೀವ್ರ ಪ್ರವಾಹ ಮತ್ತು ಭೂಕುಸಿತದಿಂದ ನೆಲಸಮವಾದ ಮನೆಗಳ ಅವಶೇಷಗಳಿಂದ ಕಳೆದ ರಾತ್ರಿ ಮತ್ತೆ 63 ಶವಗಳನ್ನು ಹೊರ ತೆಗೆದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಕ್ಕೇರಿದ ಪ್ರವಾಹದ ಹರಿವು ನೂರಾರು ಬಂಡೆಗಳನ್ನು ಮತ್ತು ಟನ್ಗಟ್ಟಲೆ ಕೆಸರನ್ನು ಹೊತ್ತು ತಂದಿರುವ ಪರಿಣಾಮ ಈ ಅನಾಹುತ ಸಂಭವಿಸಿದೆ.
ಶುಕ್ರವಾರ ಮೇಘಸ್ಫೋಟ ಮತ್ತು ಪ್ರವಾಹದಿಂದ ಧ್ವಂಸವಾದ ಖೈಬರ್ ಪಖ್ತೂಂಖ್ವಾ ಪ್ರಾಂತ್ಯದ ಭಾಗಗಳಲ್ಲಿ ಒಂದಾದ ಬುನೇರ್ನಲ್ಲಿ ನೂರಾರು ರಕ್ಷಣಾ ಕಾರ್ಯಕರ್ತರು ಇನ್ನೂ ಬದುಕುಳಿದಿರುವವರಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತುರ್ತು ಸೇವೆಗಳ ವಕ್ತಾರ ಮೊಹಮದ್ ಸುಹೈಲ್ ತಿಳಿಸಿದ್ದಾರೆ. ಘಟನೆಯಲ್ಲಿ ನೂರಾರು ಮನೆಗಳು ಕೊಚ್ಚಿಹೋಗಿವೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…