pakisthan
ಬುನೇರ್(ಪಾಕಿಸ್ತಾನ): ವಾಯುವ್ಯ ಪಾಕಿಸ್ತಾನದ ಬುನೇರ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹಕ್ಕೆ 300ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ.
ರಕ್ಷಣಾ ಕಾರ್ಯಕರ್ತರು ತೀವ್ರ ಪ್ರವಾಹ ಮತ್ತು ಭೂಕುಸಿತದಿಂದ ನೆಲಸಮವಾದ ಮನೆಗಳ ಅವಶೇಷಗಳಿಂದ ಕಳೆದ ರಾತ್ರಿ ಮತ್ತೆ 63 ಶವಗಳನ್ನು ಹೊರ ತೆಗೆದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಕ್ಕೇರಿದ ಪ್ರವಾಹದ ಹರಿವು ನೂರಾರು ಬಂಡೆಗಳನ್ನು ಮತ್ತು ಟನ್ಗಟ್ಟಲೆ ಕೆಸರನ್ನು ಹೊತ್ತು ತಂದಿರುವ ಪರಿಣಾಮ ಈ ಅನಾಹುತ ಸಂಭವಿಸಿದೆ.
ಶುಕ್ರವಾರ ಮೇಘಸ್ಫೋಟ ಮತ್ತು ಪ್ರವಾಹದಿಂದ ಧ್ವಂಸವಾದ ಖೈಬರ್ ಪಖ್ತೂಂಖ್ವಾ ಪ್ರಾಂತ್ಯದ ಭಾಗಗಳಲ್ಲಿ ಒಂದಾದ ಬುನೇರ್ನಲ್ಲಿ ನೂರಾರು ರಕ್ಷಣಾ ಕಾರ್ಯಕರ್ತರು ಇನ್ನೂ ಬದುಕುಳಿದಿರುವವರಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತುರ್ತು ಸೇವೆಗಳ ವಕ್ತಾರ ಮೊಹಮದ್ ಸುಹೈಲ್ ತಿಳಿಸಿದ್ದಾರೆ. ಘಟನೆಯಲ್ಲಿ ನೂರಾರು ಮನೆಗಳು ಕೊಚ್ಚಿಹೋಗಿವೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…