pakisthan
ಬುನೇರ್(ಪಾಕಿಸ್ತಾನ): ವಾಯುವ್ಯ ಪಾಕಿಸ್ತಾನದ ಬುನೇರ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹಕ್ಕೆ 300ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ.
ರಕ್ಷಣಾ ಕಾರ್ಯಕರ್ತರು ತೀವ್ರ ಪ್ರವಾಹ ಮತ್ತು ಭೂಕುಸಿತದಿಂದ ನೆಲಸಮವಾದ ಮನೆಗಳ ಅವಶೇಷಗಳಿಂದ ಕಳೆದ ರಾತ್ರಿ ಮತ್ತೆ 63 ಶವಗಳನ್ನು ಹೊರ ತೆಗೆದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಕ್ಕೇರಿದ ಪ್ರವಾಹದ ಹರಿವು ನೂರಾರು ಬಂಡೆಗಳನ್ನು ಮತ್ತು ಟನ್ಗಟ್ಟಲೆ ಕೆಸರನ್ನು ಹೊತ್ತು ತಂದಿರುವ ಪರಿಣಾಮ ಈ ಅನಾಹುತ ಸಂಭವಿಸಿದೆ.
ಶುಕ್ರವಾರ ಮೇಘಸ್ಫೋಟ ಮತ್ತು ಪ್ರವಾಹದಿಂದ ಧ್ವಂಸವಾದ ಖೈಬರ್ ಪಖ್ತೂಂಖ್ವಾ ಪ್ರಾಂತ್ಯದ ಭಾಗಗಳಲ್ಲಿ ಒಂದಾದ ಬುನೇರ್ನಲ್ಲಿ ನೂರಾರು ರಕ್ಷಣಾ ಕಾರ್ಯಕರ್ತರು ಇನ್ನೂ ಬದುಕುಳಿದಿರುವವರಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತುರ್ತು ಸೇವೆಗಳ ವಕ್ತಾರ ಮೊಹಮದ್ ಸುಹೈಲ್ ತಿಳಿಸಿದ್ದಾರೆ. ಘಟನೆಯಲ್ಲಿ ನೂರಾರು ಮನೆಗಳು ಕೊಚ್ಚಿಹೋಗಿವೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…