ದೇಶ- ವಿದೇಶ

ಉತ್ತರಾಖಂಡ್‌ನಲ್ಲಿ ಭೀಕರ ಪ್ರವಾಹ: ತಗ್ಗು ಪ್ರದೇಶಗಳು ಸಂಪೂರ್ಣ ಮುಳುಗಡೆ

ಡೆಹ್ರಾಡೂನ್‌: ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ರಸ್ತೆಗಳು, ಮನೆಗಳು ಮತ್ತು ಅಂಗಡಿಗಳು ಹಾನಿಗೀಡಾಗಿದ್ದು, ಇಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ.

ಕಾಣೆಯಾದ ಇಬ್ಬರು ವ್ಯಕ್ತಿಗಳನ್ನು ಪತ್ತೆಹಚ್ಚಲು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರೆದಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಧಾರಾಕಾರ ಮಳೆ ಮತ್ತು ಬಿರುಗಾಳಿಯೊಂದಿಗೆ ಹೆಚ್ಚುವರಿ ಮಳೆಯಾಗುವ ನಿರೀಕ್ಷೆಯಿದೆ.

ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ತಡರಾತ್ರಿ ಡೆಹ್ರಾಡೂನ್‌ನ ಷಷ್ಠಧಾರದಲ್ಲಿ ಭಾರೀ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿದೆ. ಜಿಲ್ಲಾಡಳಿತ, ಎಸ್‌‍ಡಿಆರ್‌ಎಫ್‌ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ನಾನು ಈ ನಿಟ್ಟಿನಲ್ಲಿ ಸ್ಥಳೀಯ ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಪ್ರತಿಯೊಬ್ಬರ ಸುರಕ್ಷತೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಕ್ಟೋಬರ್.‌9ರಿಂದ ಹಾಸನಾಂಬ ಜಾತ್ರಾ ಮಹೋತ್ಸವ

ಉತ್ತರಾಖಂಡದಲ್ಲಿ ಭಾರೀ ಮಳೆಯ ನಂತರದ ಪರಿಸ್ಥಿತಿಯ ಬಗ್ಗೆ ಧಾಮಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ವಿವರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಎಕ್ಸ್‌ನಲ್ಲಿ ತಿಳಿಸಿದೆ.

ಡೆಹ್ರಾಡೂನ್‌ ಮತ್ತು ತೆಹ್ರಿ ಗರ್ವಾಲ್‌ಗೆ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್‌ ಅಲರ್ಟ್‌ ಘೋಷಿಸಿದೆ. ಗಂಟೆಗೆ 15 ಮಿ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು ಸಹಿತ ಮಳೆ ಮತ್ತು ಗಂಟೆಗೆ 87 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ರೆಡ್‌ ಅಲರ್ಟ್‌ ಮುನ್ಸೂಚನೆ ನೀಡಿದೆ. ಈ ತೀವ್ರ ಹವಾಮಾನ ಪರಿಸ್ಥಿತಿಗಳು ದಿನವಿಡೀ ಮುಂದುವರಿಯುವ ನಿರೀಕ್ಷೆಯಿದ್ದು, ಮತ್ತಷ್ಟು ಹಾನಿ ಮತ್ತು ಅಡಚಣೆಗಳು ಉಂಟಾಗುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

5 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

21 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago