ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಟೆಕ್ಸಾಸ್, ಲೂಯಿಸಿಯಾನ ಹಾಗೂ ನ್ಯೂಯಾರ್ಕ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾವುಗಳು ಸಂಭವಿಸಿದೆ. ಭಾರೀ ಹಿಮಪಾತ ಹಾಗೂ ಬಿರುಗಾಳಿಯಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಕತ್ತಲೆಯಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ಸುಮಾರು 30,000ಕ್ಕೂ ಹೆಚ್ಚು ವಿಮಾನ ಪ್ರಯಾಣದ ಮೇಲೆ ಪರಿಣಾಮ ಬೀರಿದ್ದು, ಸಾವಿರಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಇನ್ನು ನ್ಯೂಯಾರ್ಕ್, ಬೋಸ್ಟನ್ ಮತ್ತು ಫಿಲಡೆಲ್ಟಿಯಾದಂತಹ ಪ್ರಮುಖ ನಗರಗಳಲ್ಲಿ ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದ್ದು, ಆನ್ಲೈನ್ ತರಗತಿಗಳಿಗೆ ಸೂಚನೆ ನೀಡಲಾಗಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…