ದೇಶ- ವಿದೇಶ

ಈಶಾ ಫೌಂಡೇಷನ್‌ ಶಾಲೆಯಲ್ಲಿ ಮಗನ ಮೇಲೆ ಲೈಂಗಿಕ ಕಿರುಕುಳ: ಪೋಷಕರ ಗಂಭೀರ ಆರೋಪ

ಹೈದರಾಬಾದ್:‌ ಜಗ್ಗಿ ವಾಸುದೇವ್‌ ಆಧ್ಯತ್ಮೀಕ ಕೇಂದ್ರ ಈಶಾ ಫೌಂಡೇಷನ್‌ ನಡೆಸುತ್ತಿರುವ ಶಾಲೆಯಲ್ಲಿ ತಮ್ಮ ಮಗನ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಈಶಾ ಫೌಂಡೇಚನ್‌ ಒಡೆತನದಲ್ಲಿರಿವ ಶಿಕ್ಷಣ ಸಂಸ್ಥೆಗಳು ನಿರಂಕುಶವಾಗಿ ನಡೆದುಕೊಳ್ಳುತ್ತಿವೆ ಎಂದು ಆಂಧ್ರಪ್ರದೇಶದ ರಾಜಂಡ್ರಿಯ ದಂಪತಿ ಸತ್ಯ ನರೇಂದ್ರ ಮತ್ತು ಯಾಮಿನಿ ರಾಗಣಿ ದೂರಿದ್ದಾರೆ.

ಈಶಾ ಸ್ಕೊಲ್‌ನಲ್ಲಿ ಬಾಲಕನೊಬ್ಬ ಕಳೆದ 3 ವರ್ಷಗಳಿಂದ ತಮ್ಮ ಮಗನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ಶಾಲೆಯ ಆಡಳಿತ ಮಂಡಳಿ ಗಮನಕ್ಕೆ ತಂದರು ಕೂಡ ಯಾವುದೇ ರೀತಿಯ್ರ ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಸ್ವತಃ ರಾಜಂಡ್ರಿಯ ದಂಪತಿ ಸತ್ಯ ನರೇಂದ್ರ ಮತ್ತು ಯಾಮಿನಿ ರಾಗಣಿಯು ಈಶಾ ಫೌಂಡೇಷನ್‌ನ ಮಾಜಿ ಸ್ವಯಂಸೇವಕರಾಗಿದ್ದಾರೆ. ಐದುನೈದು ವರ್ಷಗಳಿಂದ ಸ್ವಯಂಸೇವಕರಾಗಿದ್ದ ಅವರು ಇತ್ತೀಚೆಗೆ ಈಶಾ ಫೌಂಡೇಷನ್‌ನಿಂದ ಹೊರನಡೆದಿರುವುದಾಗಿ ಹೇಳಿಕೊಂಡಿದ್ದಾರೆ.

ಈಶಾ ಫೌಂಡೇಷನ್‌ ಶಾಲೆಗಳಲ್ಲಿ ಕೆಲವು ಆಚರಣೆಗಳಲ್ಲಿ ಹದಿಹರೆಯದ ಬಾಲಕಿಯರು ಕೆಲವು ಆಚರಣೆಗಳಲ್ಲಿ ಬರಿ ಎದೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಲಾಗುತ್ತಿದೆ. ಅಲ್ಲದೆ 8 ವರ್ಷದ ಬಾಲಕಿ ಮೇಲೆ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದಂಪತಿ ಅಲ್ಲಿನ ಖಾಸಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…

11 mins ago

ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…

19 mins ago

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…

47 mins ago

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…

1 hour ago

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

2 hours ago

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್‌ಡಿಕೆ ಸವಾಲು

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…

2 hours ago