ಹೈದರಾಬಾದ್: ಜಗ್ಗಿ ವಾಸುದೇವ್ ಆಧ್ಯತ್ಮೀಕ ಕೇಂದ್ರ ಈಶಾ ಫೌಂಡೇಷನ್ ನಡೆಸುತ್ತಿರುವ ಶಾಲೆಯಲ್ಲಿ ತಮ್ಮ ಮಗನ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಈಶಾ ಫೌಂಡೇಚನ್ ಒಡೆತನದಲ್ಲಿರಿವ ಶಿಕ್ಷಣ ಸಂಸ್ಥೆಗಳು ನಿರಂಕುಶವಾಗಿ ನಡೆದುಕೊಳ್ಳುತ್ತಿವೆ ಎಂದು ಆಂಧ್ರಪ್ರದೇಶದ ರಾಜಂಡ್ರಿಯ ದಂಪತಿ ಸತ್ಯ ನರೇಂದ್ರ ಮತ್ತು ಯಾಮಿನಿ ರಾಗಣಿ ದೂರಿದ್ದಾರೆ.
ಈಶಾ ಸ್ಕೊಲ್ನಲ್ಲಿ ಬಾಲಕನೊಬ್ಬ ಕಳೆದ 3 ವರ್ಷಗಳಿಂದ ತಮ್ಮ ಮಗನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ಶಾಲೆಯ ಆಡಳಿತ ಮಂಡಳಿ ಗಮನಕ್ಕೆ ತಂದರು ಕೂಡ ಯಾವುದೇ ರೀತಿಯ್ರ ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.
ಸ್ವತಃ ರಾಜಂಡ್ರಿಯ ದಂಪತಿ ಸತ್ಯ ನರೇಂದ್ರ ಮತ್ತು ಯಾಮಿನಿ ರಾಗಣಿಯು ಈಶಾ ಫೌಂಡೇಷನ್ನ ಮಾಜಿ ಸ್ವಯಂಸೇವಕರಾಗಿದ್ದಾರೆ. ಐದುನೈದು ವರ್ಷಗಳಿಂದ ಸ್ವಯಂಸೇವಕರಾಗಿದ್ದ ಅವರು ಇತ್ತೀಚೆಗೆ ಈಶಾ ಫೌಂಡೇಷನ್ನಿಂದ ಹೊರನಡೆದಿರುವುದಾಗಿ ಹೇಳಿಕೊಂಡಿದ್ದಾರೆ.
ಈಶಾ ಫೌಂಡೇಷನ್ ಶಾಲೆಗಳಲ್ಲಿ ಕೆಲವು ಆಚರಣೆಗಳಲ್ಲಿ ಹದಿಹರೆಯದ ಬಾಲಕಿಯರು ಕೆಲವು ಆಚರಣೆಗಳಲ್ಲಿ ಬರಿ ಎದೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಲಾಗುತ್ತಿದೆ. ಅಲ್ಲದೆ 8 ವರ್ಷದ ಬಾಲಕಿ ಮೇಲೆ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದಂಪತಿ ಅಲ್ಲಿನ ಖಾಸಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…