ದೇಶ- ವಿದೇಶ

ಆರ್‌ಬಿಐನಿಂದ ಜಿಡಿಪಿ ಬೆಳವಣಿಗೆ ಅಂದಾಜು ದರ ಶೇ.6.6ಕ್ಕೆ ಇಳಿಕೆ : ಶಕ್ತಿಕಾಂತ್‌ ದಾಸ್‌

ನವದೆಹಲಿ: ಪ್ರಸ್ತಕ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ಅಂದಾಜು ದರವನ್ನು ಆರ್‌ಬಿಐ ಶೇ.7.2 ರಿಂದ ಶೇ.6.6ಕ್ಕೆ ಇಳಿಕೆ ಮಾಡಿದೆ ಎಂದು ಆರ್‌ಬಿಐ ಗರ್ವನರ್‌ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಡಿ.6) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದು 2023ರ ಹಣಕಾಸು ವರ್ಷದಂತೆ ಮುಂದುವರೆದುಕೊಂಡು ಹೋಗುತ್ತದೆ. ಆದರೆ ಶೇ.6.6ರಲ್ಲೇ ರೆಪೋ ದರ ಮುಂದುವರಿಸಲು ಹಣಕಾಸು ನೀತಿ ಸಮಿತಿಯು 4:2 ಬಹುಮತದ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ.

ಜಾಗತಿಕ ಆರ್ಥಿಕತೆಯೂ ವಿಕಸನಗೊಳ್ಳುತ್ತಿರುವ ಈ ವೇಳೆಯಲ್ಲಿ ಭಾರತದ ಆರ್ಥಿಕತೆ ಉತ್ತಮ ಸ್ಥಾನದಲ್ಲಿದೆ. ಆದರೆ ವಿಕಸನಗೊಳ್ಳುತ್ತಿರುವ ಸ್ಥೂಲ ಆರ್ಥಿಕತೆ ಹಾಗೂ ಹಣಕಾಸಿನ ಬೆಳವಣಿಗೆಗಳ ವಿವರದ ಮೌಲ್ಯಮಾಪನದ ಬಳಿಕ ಹಣಕಾಸು ನೀತಿಯು 4:2ರ ಬಹುಮತದಿಂದ ರೆಪೋ ದರದಲ್ಲಿ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಹೀಗಾಗಿ ಸ್ಟ್ಯಾಂಡರ್ಡ್‌ ಠೇವಣಿ ಸೌಲಭ್ಯ ದರವು 6.25ರಲ್ಲೇ ಉಳಿದಿದೆ. ಮಾರ್ಜಿನಲ್‌ ಸ್ಟ್ಯಾಂಡಿಂಗ್‌ ಫೆಸಿಲಿಟಿ ದರ 6.75ರಷ್ಟಿದೆ ಎಂದು ಹೇಳಿದ್ದಾರೆ.

ಇನ್ನು ಪ್ರಸ್ತಕ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ.4.8ಕ್ಕೆ ಏರಿಕೆಯಾಗಬಹುದು. ಈ ಹಿಂದೆ ಶೇ.4.5 ರಷ್ಟು ಎಂದಷ್ಟೇ ಮಾತ್ರ ಅಂದಾಜಿಸಲಾಗಿತ್ತು. ಅಲ್ಲದೇ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಾಲ ನೀಡಲು ಬ್ಯಾಂಕ್‌ಗಳ ಬಳಿ ಅಧಿಕ ಹಣ ಲಭ್ಯವಾಗುವ ರೀತಿಯಲ್ಲಿ ಪಡೆಯಲು ಆರ್‌ಬಿಐ ನಗದು ಮೀಸಲು ಅನುಪಾತವನ್ನು ಶೇ.4.5 ರಿಂದ ಶೇ.4ಕ್ಕೆ ಇಳಿಕೆ ಮಾಡಿದೆ. ಅಲ್ಲದೇ ಈ ನಿರ್ಧಾರದಿಂದ ಬ್ಯಾಂಕ್‌ಗಳಿಗೆ 1.16ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಲು ಹಾಗೂ ಸಾಲ ನೀಡುವ ಸಾಮರ್ಥ್ಯವನ್ನು ಸುಧಾರಿಸಲು ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

2 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

2 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

2 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

2 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

2 hours ago