ನವದೆಹಲಿ: ಪ್ರಸ್ತಕ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ಅಂದಾಜು ದರವನ್ನು ಆರ್ಬಿಐ ಶೇ.7.2 ರಿಂದ ಶೇ.6.6ಕ್ಕೆ ಇಳಿಕೆ ಮಾಡಿದೆ ಎಂದು ಆರ್ಬಿಐ ಗರ್ವನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಡಿ.6) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದು 2023ರ ಹಣಕಾಸು ವರ್ಷದಂತೆ ಮುಂದುವರೆದುಕೊಂಡು ಹೋಗುತ್ತದೆ. ಆದರೆ ಶೇ.6.6ರಲ್ಲೇ ರೆಪೋ ದರ ಮುಂದುವರಿಸಲು ಹಣಕಾಸು ನೀತಿ ಸಮಿತಿಯು 4:2 ಬಹುಮತದ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ.
ಜಾಗತಿಕ ಆರ್ಥಿಕತೆಯೂ ವಿಕಸನಗೊಳ್ಳುತ್ತಿರುವ ಈ ವೇಳೆಯಲ್ಲಿ ಭಾರತದ ಆರ್ಥಿಕತೆ ಉತ್ತಮ ಸ್ಥಾನದಲ್ಲಿದೆ. ಆದರೆ ವಿಕಸನಗೊಳ್ಳುತ್ತಿರುವ ಸ್ಥೂಲ ಆರ್ಥಿಕತೆ ಹಾಗೂ ಹಣಕಾಸಿನ ಬೆಳವಣಿಗೆಗಳ ವಿವರದ ಮೌಲ್ಯಮಾಪನದ ಬಳಿಕ ಹಣಕಾಸು ನೀತಿಯು 4:2ರ ಬಹುಮತದಿಂದ ರೆಪೋ ದರದಲ್ಲಿ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಹೀಗಾಗಿ ಸ್ಟ್ಯಾಂಡರ್ಡ್ ಠೇವಣಿ ಸೌಲಭ್ಯ ದರವು 6.25ರಲ್ಲೇ ಉಳಿದಿದೆ. ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ ದರ 6.75ರಷ್ಟಿದೆ ಎಂದು ಹೇಳಿದ್ದಾರೆ.
ಇನ್ನು ಪ್ರಸ್ತಕ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ.4.8ಕ್ಕೆ ಏರಿಕೆಯಾಗಬಹುದು. ಈ ಹಿಂದೆ ಶೇ.4.5 ರಷ್ಟು ಎಂದಷ್ಟೇ ಮಾತ್ರ ಅಂದಾಜಿಸಲಾಗಿತ್ತು. ಅಲ್ಲದೇ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಾಲ ನೀಡಲು ಬ್ಯಾಂಕ್ಗಳ ಬಳಿ ಅಧಿಕ ಹಣ ಲಭ್ಯವಾಗುವ ರೀತಿಯಲ್ಲಿ ಪಡೆಯಲು ಆರ್ಬಿಐ ನಗದು ಮೀಸಲು ಅನುಪಾತವನ್ನು ಶೇ.4.5 ರಿಂದ ಶೇ.4ಕ್ಕೆ ಇಳಿಕೆ ಮಾಡಿದೆ. ಅಲ್ಲದೇ ಈ ನಿರ್ಧಾರದಿಂದ ಬ್ಯಾಂಕ್ಗಳಿಗೆ 1.16ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಲು ಹಾಗೂ ಸಾಲ ನೀಡುವ ಸಾಮರ್ಥ್ಯವನ್ನು ಸುಧಾರಿಸಲು ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…