ದೇಶ- ವಿದೇಶ

ಆರ್‌ಬಿಐನಿಂದ ಜಿಡಿಪಿ ಬೆಳವಣಿಗೆ ಅಂದಾಜು ದರ ಶೇ.6.6ಕ್ಕೆ ಇಳಿಕೆ : ಶಕ್ತಿಕಾಂತ್‌ ದಾಸ್‌

ನವದೆಹಲಿ: ಪ್ರಸ್ತಕ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ ಅಂದಾಜು ದರವನ್ನು ಆರ್‌ಬಿಐ ಶೇ.7.2 ರಿಂದ ಶೇ.6.6ಕ್ಕೆ ಇಳಿಕೆ ಮಾಡಿದೆ ಎಂದು ಆರ್‌ಬಿಐ ಗರ್ವನರ್‌ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಡಿ.6) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದು 2023ರ ಹಣಕಾಸು ವರ್ಷದಂತೆ ಮುಂದುವರೆದುಕೊಂಡು ಹೋಗುತ್ತದೆ. ಆದರೆ ಶೇ.6.6ರಲ್ಲೇ ರೆಪೋ ದರ ಮುಂದುವರಿಸಲು ಹಣಕಾಸು ನೀತಿ ಸಮಿತಿಯು 4:2 ಬಹುಮತದ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ.

ಜಾಗತಿಕ ಆರ್ಥಿಕತೆಯೂ ವಿಕಸನಗೊಳ್ಳುತ್ತಿರುವ ಈ ವೇಳೆಯಲ್ಲಿ ಭಾರತದ ಆರ್ಥಿಕತೆ ಉತ್ತಮ ಸ್ಥಾನದಲ್ಲಿದೆ. ಆದರೆ ವಿಕಸನಗೊಳ್ಳುತ್ತಿರುವ ಸ್ಥೂಲ ಆರ್ಥಿಕತೆ ಹಾಗೂ ಹಣಕಾಸಿನ ಬೆಳವಣಿಗೆಗಳ ವಿವರದ ಮೌಲ್ಯಮಾಪನದ ಬಳಿಕ ಹಣಕಾಸು ನೀತಿಯು 4:2ರ ಬಹುಮತದಿಂದ ರೆಪೋ ದರದಲ್ಲಿ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಹೀಗಾಗಿ ಸ್ಟ್ಯಾಂಡರ್ಡ್‌ ಠೇವಣಿ ಸೌಲಭ್ಯ ದರವು 6.25ರಲ್ಲೇ ಉಳಿದಿದೆ. ಮಾರ್ಜಿನಲ್‌ ಸ್ಟ್ಯಾಂಡಿಂಗ್‌ ಫೆಸಿಲಿಟಿ ದರ 6.75ರಷ್ಟಿದೆ ಎಂದು ಹೇಳಿದ್ದಾರೆ.

ಇನ್ನು ಪ್ರಸ್ತಕ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ.4.8ಕ್ಕೆ ಏರಿಕೆಯಾಗಬಹುದು. ಈ ಹಿಂದೆ ಶೇ.4.5 ರಷ್ಟು ಎಂದಷ್ಟೇ ಮಾತ್ರ ಅಂದಾಜಿಸಲಾಗಿತ್ತು. ಅಲ್ಲದೇ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಾಲ ನೀಡಲು ಬ್ಯಾಂಕ್‌ಗಳ ಬಳಿ ಅಧಿಕ ಹಣ ಲಭ್ಯವಾಗುವ ರೀತಿಯಲ್ಲಿ ಪಡೆಯಲು ಆರ್‌ಬಿಐ ನಗದು ಮೀಸಲು ಅನುಪಾತವನ್ನು ಶೇ.4.5 ರಿಂದ ಶೇ.4ಕ್ಕೆ ಇಳಿಕೆ ಮಾಡಿದೆ. ಅಲ್ಲದೇ ಈ ನಿರ್ಧಾರದಿಂದ ಬ್ಯಾಂಕ್‌ಗಳಿಗೆ 1.16ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಲು ಹಾಗೂ ಸಾಲ ನೀಡುವ ಸಾಮರ್ಥ್ಯವನ್ನು ಸುಧಾರಿಸಲು ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago