Mysore
26
scattered clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

ನವೋದ್ಯಮ ಕ್ಷೇತ್ರದಲ್ಲಿನ ರಾಜ್ಯದ ಪ್ರಗತಿಯನ್ನಷ್ಟೇ ಉಲ್ಲೇಖಿಸಿದ್ದೇನೆ: ಶಶಿ ತೂರೂರ್‌ ಸ್ಪಷ್ಟನೆ

ತಿರುವನಂತಪುರ: ನನ್ನ ಲೇಖನದಲ್ಲಿ ನಾನು ಕೇರಳದ ಸಿಪಿಐ ನೇತತ್ವದ ಸರ್ಕಾರವನ್ನು ಹೊಗಳಿಲ್ಲ. ಬದಲಿಗಡ ನವೋದ್ಯಮ ಕ್ಷೇತ್ರದಲ್ಲಿನ ರಾಜ್ಯದ ಪ್ರಗತಿಯನ್ನಷ್ಟೇ ಉಲ್ಲೇಖಿಸಿದ್ದೇನೆ ಎಂದು ಸಂಸದ ಶಶಿ ತರೂರ್‌ ಸ್ಪಷ್ಟನೆ ನೀಡಿದ್ದಾರೆ.

ತಿರುವಂತಪುರದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಆಂಗ್ಲ ದಿನಪತ್ರಿಕೆಯಲ್ಲಿ ಬರೆದ ಲೇಖನದಲ್ಲಿ ಯಾವುದೇ ರಾಜಕೀಯ ಉಲ್ಲೇಖ ಇರಲಿಲ್ಲ. ಕೇರಳದ ಉದ್ಯಮಶೀಲತೆ ಹಾಗೂ ನಾವೀನ್ಯತೆಯ ಬೆಳವಣಿಗೆಯ ಬಗ್ಗೆ ಪ್ರತಿಪಾದಿಸಿದ್ದೇನೆ ಅಷ್ಟೇ. ರಾಜ್ಯದ ಅಭಿವದ್ಧಿಯನ್ನು ಎತ್ತಿ ಹಿಡಿಯುವ ಪ್ರಯತ್ನವನ್ನು ಮಾಡಿದ್ದೇನೆ ಎಂದು ಹೇಳಿದ್ದಾರೆ.

ನಾನು ಗ್ಲೋಬಲ್‌ ಸ್ಟಾರ್ಟ್‌ಅಪ್‌ ಇಕೊಸಿಸ್ಟಂ 2024 ವರದಿ ಆಧರಿಸಿ ನಾನು ಲೇಖನವನ್ನು ಬರೆದಿದ್ದೇನೆ. ಕೇರಳವು 18 ತಿಂಗಳಲ್ಲಿ 1.7 ಶತಕೋಟಿ ಅಮೆರಿಕನ್‌ ಡಾಲ್‌ ಹೂಡಿಕೆಯನ್ನು ಆಕರ್ಷಸಿದೆ ಎಂದು ವರದಿಯಲ್ಲಿದೆ. ಅಲ್ಲದೇ ಕೇರಳದಲ್ಲಿನ ಒಟ್ಟಾರೆ ಕೈಗಾರಿಕಾ ವಾತಾವರಣ ಎಂದು ನಂಬುವುದಿಲ್ಲ. ಕೇರಳ ಈಗಲೂ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಶೇ.80 ರಷ್ಟು ಸಾರ್ವಜನಿಕ ಉದ್ದಿಮೆಗಳು ನಷ್ಟದಲ್ಲಿವೆ ಎಂದು ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಮಾಜಿ ಸಿಎಂ ಉಮ್ನನ್‌ ಚಾಂಡಿ ಅವರು ರಾಜ್ಯದ ಅಡಿಪಾಯ ಹಾಕಿದರು. ಅವರೇ ಸ್ಟಾರ್ಟ್‌ಅಪ್‌ ವಿಲ್ಲೇಜ್‌ ಮತ್ತು ಸ್ಟಾರ್ಟ್‌ಅಪ್‌ ಮಿಷನ್‌ ಸೇರಿದಂತೆ ಅನೇಕ ಉಪಕ್ರಮಗಳನ್ನು ಪ್ರಾರಂಭಿಸಿದು. ಆದರೆ ಈಗಿನ ಸರ್ಕಾರ ಅದನ್ನು ಅಭಿವೃದ್ಧಿ ಪಡಿಸಿ ಮುನ್ನಡೆಸಿಕೊಂಡು ಹೋಗುತ್ತಿದೆ ಎಂದು ತಿಳಿಸಿದ್ದಾರೆ.

Tags:
error: Content is protected !!