ದೇಶ- ವಿದೇಶ

ಶೀಷ್‌ ಮಹಲ್‌ ವಿವಾದ: ಕೇಂದ್ರ ಲೋಕೋಪಯೋಗಿ ಇಲಾಖೆಗೆ ತನಿಖೆ ನಡೆಸುವಂತೆ ಆದೇಶಿಸಿದ ಕೇಂದ್ರ ಜಾಗೃತ ಆಯೋಗ

ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರ ಅಧಿಕೃತ ನಿವಾಸವನ್ನು ಎಂಟು ಎಕರೆ ವಿಸ್ತೀರ್ಣದಲ್ಲಿ ಐಷಾರರಾಮಿ ಮಹಲಾಗಿ ಪರವರ್ತಿಸಲು ಕಟ್ಟಡ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಜಾಗೃತ ಆಯೋಗ ವಿವರವಾದ ತನಿಖೆಗೆ ಆದೇಶ ನೀಡಿದೆ.

ಬಿಜೆಪಿ ನಾಯಕ ವಿಜೇಂದರ್‌ ಗುಪ್ತಾ ಅವರು 2024ರರ ಅಕ್ಟೋಬರ್‌ 14 ರಂದು ಕೇಂದ್ರ ಜಾಗೃತ ಆಯೋಗಕ್ಕೆ ದೂರು ನೀಡಿದ್ದರು. ಈ ದೂರಿನ ಅನ್ವಯ ಐಷಾರಾಮಿ ಮತ್ತು ನವೀಕರಣದ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಲೋಕೋಪಯೋಗಿ ಇಲಾಖೆಗೆ ತಿಳಿಸಿದೆ.

ಕೇಂದ್ರ ಜಾಗೃತ ಆಯೋಗ ಶೀಷ್‌ ಮಹಲ್‌ ವಿವಾದದ ದೂರರನ್ನು 2024ರ ನವೆಂಬರ್‌ 14ರಂದು ಅಗತ್ಯ ಕ್ರಮಕ್ಕಾಗಿ ಔಪಚಾರಿಕವಾಗಿ ಸಿಪಿಡಬ್ಲ್ಯೂಡಿಗೆ ರವಾನಿಸಲಾಗಿತ್ತು. ಇದನ್ನು ಡಿಸೆಂಬರ್‌ 24 ರಂದು ಆರಂಭಿಕ ವಿಚಾರಣೆಯ ಬಳಿಕ ಸಿಪಿಡಬ್ಲ್ಯೂಡಿ ಕೇಂದ್ರ ಜಾಗೃತ ಆಯೋಗಕ್ಕೆ ವಾಸ್ತವಿಕ ವರದಿಯನ್ನು ಸಲ್ಲಿಕೆ ಮಾಡಲಾಗಿತ್ತು. ಆದರೆ ಇದೀಗ ಫೆಬ್ರವರಿ.13 ರಂದು ವರದಿಯನ್ನು ಪರಿಶೀಲಿಸಿದ ನಂತರ ಕೇಂದ್ರ ಜಾಗೃತ ಆಯೋಗ ಸಿಎಂ ನಿವಾಸದ ನವೀಕರಣ ಹಾಗೂ ಐಷಾರಾಮಿ ಸೇರ್ಪಡೆಗಳ ವೆಚ್ಚದ ಕುರಿತು ವಿವರವಾದ ತನಿಖೆ ನಡೆಸುವಂತೆ ಸೂಚಿಸಿದೆ.

ದೂರಿನಲ್ಲಿ ಏನಿದೆ?

ದೆಹಲಿಯ ರಾಜ್‌ಪುರ ರಸ್ತೆಯಲ್ಲಿರುವ ಪ್ಲಾಟ್ ಸಂಖ್ಯೆ 45 ಮತ್ತು 47 ಸೇರಿದಂತೆ ಸರ್ಕಾರಿ ಆಸ್ತಿಗಳನ್ನು ಹಿಂದೆ ಟೈಪ್-ವಿ ಫ್ಲಾಟ್‌ಗಳಾಗಿದ್ದು, ಅಲ್ಲಿ ಹಿರಿಯ ಅಧಿಕಾರಿಗಳು ಹಾಗೂ ನ್ಯಾಯಾಧೀಶರನ್ನು ಇರಿಸಲಾಗಿತ್ತು. ಅಲ್ಲದೇ ಫ್ಲಾಗ್‌ ಸ್ಟಾಪ್‌ ರಸ್ತೆಯಲ್ಲಿರುವ ಎರಡು ಬಂಗಲೆಗಳನ್ನು ಹೊಡೆದು ಹಾಕಿ ಹೊಸ ನಿವಾಸದಲ್ಲಿ ವಿಲೀನಗೊಳಿಸಲಾಗಿದೆ. ಜೊತೆಗೆ ಶೀಷ್‌ ಮಹಲ್‌ ನಿರ್ಮಾಣವೂ ನೆಲದ ವ್ಯಾಪ್ತಿ ಹಾಗೂ ನೆಲದ ವಿಸ್ತೀರ್ಣದ ಅನುಪಾತದ ಮಾನದಂಡಗಳನ್ನು ಉಲ್ಲಂಘಿಸಿದೆ. ಹೀಗಾಗಿ ಸರಿಯಾದ ವಿನ್ಯಾಸ ಯೋಜನೆ ಮತ್ತು ಅನುಮೋದನೆಗಳನ್ನು ಹೊಂದಿಲ್ಲ ಎಂದು ದೂರು ನೀಡಿದ್ದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

7 mins ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

9 mins ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

12 mins ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

14 mins ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

19 mins ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

25 mins ago