ಚಂಡೀಗಢ: ಬೈಕ್ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ತಡರಾತ್ರಿ ಶಿವಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ. ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.
ಮಂಗತ್ ಜೊತೆಗೆ 12 ವರ್ಷದ ಬಾಲಕನಿನೋರ್ವನಿಗೂ ಗುಂಡು ತಗುಲಿದೆ. ದಾಳಿಕೋರರು ಬೆನ್ನಟ್ಟಿದಾಗ ಮಂಗತ್ ತಕ್ಷಣ ದ್ವಿಚಕ್ರ ವಾಹನದಲ್ಲಿ ಆ ಪ್ರದೇಶದಿಂದ ಪರಾರಿಯಾಗಲು ಯತ್ನಿಸಿದರು. ಆದರೂ ಬೆನ್ನಟ್ಟಿ ಮತ್ತೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.