ದೇಶ- ವಿದೇಶ

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ ಸರ್ಕಾರ ಹೆಚ್ಚಿಸಿದ್ದು, ಮಂಗಳವಾರ ತೈಲ ಕಂಪೆನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು 90 ಪೈಸೆಯಷ್ಟು ಏರಿಸಿವೆ.

ಹೊಸ ದರ ಏರಿಕೆ ಬಳಿಕ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 94 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 98 ಪೈಸೆ ಏರಿಕೆಯಾಗಿದೆ. ಹೊಸ ದರದ ಅನ್ವಯ ಪೆಟ್ರೋಲ್ ಲೀಟರ್‌ಗೆ 107.12 ರೂಪಾಯಿ ತಲುಪಿದರೆ, ಡೀಸೆಲ್ ಬೆಲೆ 95.04 ರೂ.ಗಳಿಗೆ ಏರಿಕೆಯಾಗಿದೆ.

ದಿಲ್ಲಿಯಲ್ಲಿ ಪೆಟ್ರೋಲ್ ದರವನ್ನು ಲೀಟರ್‌ಗೆ 97.77ರೂಪಾಯಿಯಿಂದ 98.64 ರೂಪಾಯಿಗೆ ಹೆಚ್ಚಿಸಲಾಗಿದ್ದು, ಡೀಸೆಲ್ ದರವು 90.67 ರೂಪಾಯಿಯಿಂದ 91.58 ರೂಪಾಯಿಗೆ ಏರಿಕೆಯಾಗಿದೆ. ಇದಕ್ಕೂ ಮೊದಲು ಮೇ 15ರಂದು ಲೀಟರ್‌ಗೆ 3 ರೂಪಾಯಿ ದರ ಏರಿಕೆ ಮಾಡಲಾಗಿತ್ತು.

ಒಂದೇ ವಾರದಲ್ಲಿ ಎರಡನೇ ಬಾರಿ ಏರಿಕೆ
ಇದು ಒಂದೇ ವಾರದಲ್ಲಿ ಎರಡನೇ ಬಾರಿಗೆ ತೈಲ ಬೆಲೆ ಏರಿಕೆಯಾಗಿದೆ. ಕಳೆದ ಶುಕ್ರವಾರ ತೈಲ ಬೆಲೆಯಲ್ಲಿ 3 ರೂ. ಹೆಚ್ಚಾಗಿತ್ತು. ಇಂದು ಮತ್ತೆ 90 ಪೈಸೆಯಷ್ಟು ಏರಿಸಲಾಗಿದೆ.

ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯಿಂದಾಗಿ ಜಾಗತಿಕ ತೈಲ ಬಿಕ್ಕಟ್ಟು ಉಂಟಾಗಿದೆ. ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಮಿತವಾಗಿ ಬಳಸುವಂತೆ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಳಸುವಂತೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಕರೆ ನೀಡಿದ್ದರು. ಹಾಗೆಯೇ ಅನಗತ್ಯ ಚಿನ್ನಾಭರಣ ಖರೀದಿಸದಂತೆ ಪ್ರಧಾನಿ ಸಲಹೆ ನೀಡಿದ್ದರು.

ದೇಶದ ಆರ್ಥಿಕತೆ ಕಾಪಾಡಲು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಬೇಕಾಗುತ್ತದೆ ಎಂದು ಇತ್ತೀಚೆಗಷ್ಟೇ ಆರ್‌ಬಿಐ ಗವರ್ನರ್ ಸಹ ಹೇಳಿದ್ದರು. ಈ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಆಗಿದೆ.

ಕೇಂದ್ರದ ಸಮರ್ಥನೆ
ಜಾಗತಿಕ ಕಚ್ಚಾ ತೈಲ ಬೆಲೆಗಳಲ್ಲಿ ತೀವ್ರ ಏರಿಕೆಯ ಹೊರತಾಗಿಯೂ ಭಾರತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಹೆಚ್ಚಳವನ್ನು ಈವರೆಗೂ ಏರಿಸದೆ ನಿಯಂತ್ರಿಸಿತ್ತು. ಈಗಾಗಲೇ ವಿಶ್ವದ ಹಲವು ದೇಶಗಳಲ್ಲಿ ಇಂಧನ ಬೆಲೆ ಶೇಕಡಾ 20 ರಿಂದ ಶೇಕಡಾ 100 ರಷ್ಟು ಏರಿಕೆ ಮಾಡಲಾಗಿದೆ. ಆದರೆ, ಭಾರತದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ ಶೇಕಡಾ 3.2 ಮತ್ತು ಶೇಕಡಾ 3.4 ರಷ್ಟು ಮಾತ್ರ ಏರಿಕೆಯಾಗಿವೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಸಮರ್ಥಿಸಿಕೊಂಡಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 900 ರೂ. ಹೆಚ್ಚಳ ಮಾಡಿದ್ದ ಕೇಂದ್ರ ಸರ್ಕಾರ, ಚಿನ್ನದ ಆಮದು ಮೇಲಿನ ಸುಂಕವನ್ನು ಹೆಚ್ಚಿಸಿತ್ತು. ಶುಕ್ರವಾರವಷ್ಟೇ ಪೆಟ್ರೋಲ್, ಡೀಸೆಲ್ ದರವನ್ನು 3 ರೂ. ಹೆಚ್ಚಳ ಮಾಡಿತ್ತು. ಸಿಎನ್‌ಜಿ ದರವನ್ನು ಕೆ.ಜಿ.ಗೆ 2 ರೂ. ಏರಿಸಿತ್ತು. ಶನಿವಾರ 1ರೂ. ಹೆಚ್ಚಳ ಮಾಡಿದೆ. ಹೀಗಾಗಿ ಮೂರು ದಿನಗಳಲ್ಲೇ 3ರೂ. ಹೆಚ್ಚಳವಾದಂತಾಗಿದೆ. ಇದೀಗ ಡೀಸೆಲ್ ಪೆಟ್ರೋಲ್ ದರವನ್ನು 9- ಪೈಸೆ ಹೆಚ್ಚಳ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ತಂಬಾಕು ನಾಟಿ ಕಾರ್ಯ ಚುರುಕು

ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ  ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…

2 hours ago

ಬಾಲ್ಯವನ್ನು ನೆನಪಿಸಿದ ಗುರು-ಶಿಷ್ಯರ ಸ್ನೇಹ ಸಮ್ಮಿಲನ

ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು…

3 hours ago

ಹೆದ್ದಾರಿಯಲ್ಲಿ ಮನಸ್ಸಿಗೆ ಮುದ ನೀಡುತ್ತಿರುವ ಕೆಂಬಣ್ಣದ ಹೂಗಳ ಚಿತ್ತಾರ!

ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ  ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…

3 hours ago

ಪಾರಂಪರಿಕ ಕಟ್ಟಡ ತತ್ತರ; ನಿರ್ವಹಣೆಗಿಲ್ಲ ಸ್ಪಷ್ಟ ಉತ್ತರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…

3 hours ago

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

13 hours ago