ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಕದನ ವಿರಾಮ ಮಾಡಿಸಿದ್ದ ಪಾಕ್‌

ನವದೆಹಲಿ: ಭಾರತದ ಬ್ರಹ್ಮೋಸ್‌ ಕ್ಷಿಪಣಿ ದಾಳಿಗೆ ಬೆದರಿದ ಪಾಕಿಸ್ತಾನ ಗೋಗರೆದು ಕದನ ವಿರಾಮ ಮಾಡಿಸಿತ್ತು ಎಂಬ ವಿಚಾರ ತಿಳಿದುಬಂದಿದೆ.

ಭಾರತವು ಮೇ.10ರ ಮುಂಜಾನೆ ಮೊದಲ ಬಾರಿಗೆ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯನ್ನು ಹಾರಿಸಿತ್ತು. ಇನ್ನೊಂದು ದೇಶದ ಮಧ್ಯೆ ಕಾದಾಟ ನಡೆಸುತ್ತಿದ್ದಾಗ ಭಾರತ ಬ್ರಹ್ಮೋಸ್‌ ಕ್ಷಿಪಣಿಯನ್ನು ಹಾರಿಸಿದ್ದು ಇದೇ ಮೊದಲು.

ಪಾಕಿಸ್ತಾನದ ಪ್ರಮುಖ ವಾಯುನೆಲೆಯನ್ನು ಗುರಿಯಾಗಿಸಿಕೊಂಡೇ ದಾಳಿ ನಡೆಸಿತ್ತು. ಭಾರತ ಮೊದಲ ಬಾರಿಗೆ ಚೀನಾ ನಿರ್ಮಿತ ವಾಯು ರಕ್ಷಣಾ ವ್ಯವಸ್ಥೆಯನ್ನು ಧ್ವಂಸ ಮಾಡಿತ್ತು.

ಈ ಸಮಯದಲ್ಲಿಯೇ ಪಾಕಿಸ್ತಾನ ತುರ್ತು ಹಸ್ತಕ್ಷೇಪಕ್ಕಾಗಿ ಅಮೇರಿಕಾದ ಸಹಾಯವನ್ನು ಕೋರಿದೆ. ಪಾಕ್‌ ನೇರವಾಗಿ ಮೊರೆ ಇಟ್ಟ ಕಾರಣ ಅಧಿಕೃತವಾಗಿ ಮಧ್ಯಪ್ರವೇಶ ಮಾಡಲು ಮುಂದಾಯಿತು.

ಮೇ.10ರ ಮಧ್ಯಾಹ್ನದ ವೇಳೆಗೆ ಪಾಕ್‌ ಡಿಜಿಎಂಒ ಮೇಜರ್‌ ಜನರಲ್‌ ಕಾಶಿಫ್‌ ಅಬ್ದುಲ್ಲಾ ಅವರು ತಮ್ಮ ಭಾರತ ಡಿಜಿಎಂಒ ಜನರಲ್‌ ರಾಜೀವ್‌ ಘಾತ್‌ ಅವರಿಗೆ ನೇರ ಕರೆ ಮಾಡಿ ಕದನ ವಿರಾಮಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿದರು. ಕೊನೆಗೆ ಸಂಜೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ಪತ್ರಿಕಾಗೋಷ್ಠಿಯಲ್ಲಿ ಎರಡು ದೇಶಗಳ ಮಧ್ಯೆ ಕದನವಿರಾಮ ನಡೆದಿರುವ ಬಗ್ಗೆ ದೃಢಪಡಿಸಿದರು.

ಆಂದೋಲನ ಡೆಸ್ಕ್

Recent Posts

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

17 mins ago

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

37 mins ago

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

58 mins ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

2 hours ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

3 hours ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

3 hours ago