ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಕದನ ವಿರಾಮ ಮಾಡಿಸಿದ್ದ ಪಾಕ್‌

ನವದೆಹಲಿ: ಭಾರತದ ಬ್ರಹ್ಮೋಸ್‌ ಕ್ಷಿಪಣಿ ದಾಳಿಗೆ ಬೆದರಿದ ಪಾಕಿಸ್ತಾನ ಗೋಗರೆದು ಕದನ ವಿರಾಮ ಮಾಡಿಸಿತ್ತು ಎಂಬ ವಿಚಾರ ತಿಳಿದುಬಂದಿದೆ.

ಭಾರತವು ಮೇ.10ರ ಮುಂಜಾನೆ ಮೊದಲ ಬಾರಿಗೆ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯನ್ನು ಹಾರಿಸಿತ್ತು. ಇನ್ನೊಂದು ದೇಶದ ಮಧ್ಯೆ ಕಾದಾಟ ನಡೆಸುತ್ತಿದ್ದಾಗ ಭಾರತ ಬ್ರಹ್ಮೋಸ್‌ ಕ್ಷಿಪಣಿಯನ್ನು ಹಾರಿಸಿದ್ದು ಇದೇ ಮೊದಲು.

ಪಾಕಿಸ್ತಾನದ ಪ್ರಮುಖ ವಾಯುನೆಲೆಯನ್ನು ಗುರಿಯಾಗಿಸಿಕೊಂಡೇ ದಾಳಿ ನಡೆಸಿತ್ತು. ಭಾರತ ಮೊದಲ ಬಾರಿಗೆ ಚೀನಾ ನಿರ್ಮಿತ ವಾಯು ರಕ್ಷಣಾ ವ್ಯವಸ್ಥೆಯನ್ನು ಧ್ವಂಸ ಮಾಡಿತ್ತು.

ಈ ಸಮಯದಲ್ಲಿಯೇ ಪಾಕಿಸ್ತಾನ ತುರ್ತು ಹಸ್ತಕ್ಷೇಪಕ್ಕಾಗಿ ಅಮೇರಿಕಾದ ಸಹಾಯವನ್ನು ಕೋರಿದೆ. ಪಾಕ್‌ ನೇರವಾಗಿ ಮೊರೆ ಇಟ್ಟ ಕಾರಣ ಅಧಿಕೃತವಾಗಿ ಮಧ್ಯಪ್ರವೇಶ ಮಾಡಲು ಮುಂದಾಯಿತು.

ಮೇ.10ರ ಮಧ್ಯಾಹ್ನದ ವೇಳೆಗೆ ಪಾಕ್‌ ಡಿಜಿಎಂಒ ಮೇಜರ್‌ ಜನರಲ್‌ ಕಾಶಿಫ್‌ ಅಬ್ದುಲ್ಲಾ ಅವರು ತಮ್ಮ ಭಾರತ ಡಿಜಿಎಂಒ ಜನರಲ್‌ ರಾಜೀವ್‌ ಘಾತ್‌ ಅವರಿಗೆ ನೇರ ಕರೆ ಮಾಡಿ ಕದನ ವಿರಾಮಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿದರು. ಕೊನೆಗೆ ಸಂಜೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ಪತ್ರಿಕಾಗೋಷ್ಠಿಯಲ್ಲಿ ಎರಡು ದೇಶಗಳ ಮಧ್ಯೆ ಕದನವಿರಾಮ ನಡೆದಿರುವ ಬಗ್ಗೆ ದೃಢಪಡಿಸಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

10 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago