ನವದೆಹಲಿ: ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿಗೆ ಬೆದರಿದ ಪಾಕಿಸ್ತಾನ ಗೋಗರೆದು ಕದನ ವಿರಾಮ ಮಾಡಿಸಿತ್ತು ಎಂಬ ವಿಚಾರ ತಿಳಿದುಬಂದಿದೆ.
ಭಾರತವು ಮೇ.10ರ ಮುಂಜಾನೆ ಮೊದಲ ಬಾರಿಗೆ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯನ್ನು ಹಾರಿಸಿತ್ತು. ಇನ್ನೊಂದು ದೇಶದ ಮಧ್ಯೆ ಕಾದಾಟ ನಡೆಸುತ್ತಿದ್ದಾಗ ಭಾರತ ಬ್ರಹ್ಮೋಸ್ ಕ್ಷಿಪಣಿಯನ್ನು ಹಾರಿಸಿದ್ದು ಇದೇ ಮೊದಲು.
ಪಾಕಿಸ್ತಾನದ ಪ್ರಮುಖ ವಾಯುನೆಲೆಯನ್ನು ಗುರಿಯಾಗಿಸಿಕೊಂಡೇ ದಾಳಿ ನಡೆಸಿತ್ತು. ಭಾರತ ಮೊದಲ ಬಾರಿಗೆ ಚೀನಾ ನಿರ್ಮಿತ ವಾಯು ರಕ್ಷಣಾ ವ್ಯವಸ್ಥೆಯನ್ನು ಧ್ವಂಸ ಮಾಡಿತ್ತು.
ಈ ಸಮಯದಲ್ಲಿಯೇ ಪಾಕಿಸ್ತಾನ ತುರ್ತು ಹಸ್ತಕ್ಷೇಪಕ್ಕಾಗಿ ಅಮೇರಿಕಾದ ಸಹಾಯವನ್ನು ಕೋರಿದೆ. ಪಾಕ್ ನೇರವಾಗಿ ಮೊರೆ ಇಟ್ಟ ಕಾರಣ ಅಧಿಕೃತವಾಗಿ ಮಧ್ಯಪ್ರವೇಶ ಮಾಡಲು ಮುಂದಾಯಿತು.
ಮೇ.10ರ ಮಧ್ಯಾಹ್ನದ ವೇಳೆಗೆ ಪಾಕ್ ಡಿಜಿಎಂಒ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ಅವರು ತಮ್ಮ ಭಾರತ ಡಿಜಿಎಂಒ ಜನರಲ್ ರಾಜೀವ್ ಘಾತ್ ಅವರಿಗೆ ನೇರ ಕರೆ ಮಾಡಿ ಕದನ ವಿರಾಮಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿದರು. ಕೊನೆಗೆ ಸಂಜೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪತ್ರಿಕಾಗೋಷ್ಠಿಯಲ್ಲಿ ಎರಡು ದೇಶಗಳ ಮಧ್ಯೆ ಕದನವಿರಾಮ ನಡೆದಿರುವ ಬಗ್ಗೆ ದೃಢಪಡಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…