ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಕದನ ವಿರಾಮ ಮಾಡಿಸಿದ್ದ ಪಾಕ್‌

ನವದೆಹಲಿ: ಭಾರತದ ಬ್ರಹ್ಮೋಸ್‌ ಕ್ಷಿಪಣಿ ದಾಳಿಗೆ ಬೆದರಿದ ಪಾಕಿಸ್ತಾನ ಗೋಗರೆದು ಕದನ ವಿರಾಮ ಮಾಡಿಸಿತ್ತು ಎಂಬ ವಿಚಾರ ತಿಳಿದುಬಂದಿದೆ.

ಭಾರತವು ಮೇ.10ರ ಮುಂಜಾನೆ ಮೊದಲ ಬಾರಿಗೆ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯನ್ನು ಹಾರಿಸಿತ್ತು. ಇನ್ನೊಂದು ದೇಶದ ಮಧ್ಯೆ ಕಾದಾಟ ನಡೆಸುತ್ತಿದ್ದಾಗ ಭಾರತ ಬ್ರಹ್ಮೋಸ್‌ ಕ್ಷಿಪಣಿಯನ್ನು ಹಾರಿಸಿದ್ದು ಇದೇ ಮೊದಲು.

ಪಾಕಿಸ್ತಾನದ ಪ್ರಮುಖ ವಾಯುನೆಲೆಯನ್ನು ಗುರಿಯಾಗಿಸಿಕೊಂಡೇ ದಾಳಿ ನಡೆಸಿತ್ತು. ಭಾರತ ಮೊದಲ ಬಾರಿಗೆ ಚೀನಾ ನಿರ್ಮಿತ ವಾಯು ರಕ್ಷಣಾ ವ್ಯವಸ್ಥೆಯನ್ನು ಧ್ವಂಸ ಮಾಡಿತ್ತು.

ಈ ಸಮಯದಲ್ಲಿಯೇ ಪಾಕಿಸ್ತಾನ ತುರ್ತು ಹಸ್ತಕ್ಷೇಪಕ್ಕಾಗಿ ಅಮೇರಿಕಾದ ಸಹಾಯವನ್ನು ಕೋರಿದೆ. ಪಾಕ್‌ ನೇರವಾಗಿ ಮೊರೆ ಇಟ್ಟ ಕಾರಣ ಅಧಿಕೃತವಾಗಿ ಮಧ್ಯಪ್ರವೇಶ ಮಾಡಲು ಮುಂದಾಯಿತು.

ಮೇ.10ರ ಮಧ್ಯಾಹ್ನದ ವೇಳೆಗೆ ಪಾಕ್‌ ಡಿಜಿಎಂಒ ಮೇಜರ್‌ ಜನರಲ್‌ ಕಾಶಿಫ್‌ ಅಬ್ದುಲ್ಲಾ ಅವರು ತಮ್ಮ ಭಾರತ ಡಿಜಿಎಂಒ ಜನರಲ್‌ ರಾಜೀವ್‌ ಘಾತ್‌ ಅವರಿಗೆ ನೇರ ಕರೆ ಮಾಡಿ ಕದನ ವಿರಾಮಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿದರು. ಕೊನೆಗೆ ಸಂಜೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ಪತ್ರಿಕಾಗೋಷ್ಠಿಯಲ್ಲಿ ಎರಡು ದೇಶಗಳ ಮಧ್ಯೆ ಕದನವಿರಾಮ ನಡೆದಿರುವ ಬಗ್ಗೆ ದೃಢಪಡಿಸಿದರು.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

3 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

3 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

3 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago