ದೇಶ- ವಿದೇಶ

ಸುಪ್ರೀಂಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆತ: ವಕೀಲನ ಬಂಧನ

ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆಯ ಸಂದರ್ಭದಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ನಡೆದಿದೆ.

ಘಟನೆ ನಡೆದ ಕೂಡಲೇ ಪೊಲೀಸರು ವಕೀಲರನ್ನು ಕೋರ್ಟ್‌ನಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ವಕೀಲ ಕಿಶೋರ್‌ ರಾಕೇಶ್‌ ಎಂಬುವವರಿಂದ ಈ ಕೃತ್ಯ ನಡೆದಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ  : ಕೂಡಲೇ ನಾಗಮೋಹನ್ ದಾಸ್ ವರದಿ ಬಿಡುಗಡೆಯಾಗಲಿ: ವಕೀಲ ಅರುಣ್‌ ಕುಮಾರ್‌ ಆಗ್ರಹ

ಆರೋಪಿಯನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುವಾಗ ಅವರು ಸನಾತನ ಧರ್ಮದ ಅವಮಾನವನ್ನು ಭಾರತ ಸಹಿಸುವುದಿಲ್ಲ ಎಂದು ಕಿರುಚಾಡಿದರು.

ಆರೋಪಿಯನ್ನು ತಕ್ಷಣವೇ ಬಂಧಿಸಲಾಗಿದ್ದು, ಮುಖ್ಯ ನ್ಯಾಯಮೂರ್ತಿ ಗವಾಯಿ ಶಾಂತಚಿತ್ತರಾಗಿದ್ದರು. ಘಟನೆ ನಡೆದ ಬಳಿಕವೂ ವಿಚಾರಣೆಯನ್ನು ಮುಂದುವರಿಸಿದರು.

ಈ ಬಗ್ಗೆ ಮಾತನಾಡಿದ ಅವರು, ಇದೆಲ್ಲದರಿಂದ ವಿಚಲಿತರಾಗಬೇಡಿ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರಲ್ಲ. ವಿಚಾರಣೆಯನ್ನು ಮುಂದುವರಿಸಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

3 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

3 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

4 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

4 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

4 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

4 hours ago