Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

CJIರತ್ತ ಶೂ ಎಸೆತ ಪ್ರಕರಣ : ವಕೀಲ ರಾಕೇಶ್ ವಿರುದ್ಧ ಕ್ರಮ ಕೈಬಿಟ್ಟ ಸುಪ್ರೀಂಕೋರ್ಟ್

ಹೊಸದಿಲ್ಲಿ : ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯ ಕೈಬಿಟ್ಟಿದೆ. ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ ಸೋಮವಾರ ಹೇಳಿದೆ. ಸ್ವತಃ ಸಿಜೆಐ ಅವರೇ ವಕೀಲರ ವಿರುದ್ಧ ಪ್ರಕ್ರಿಯೆ ಮುಂದುವರಿಸಲು ನಿರಾಕರಿಸಿದ್ದಾರೆ.

ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸರ್ವೋಚ್ಚ ನ್ಯಾಯಾಲಯದ ಬಾರ್ ಅಸೋಸಿಯೇಷನ್‌ಗೆ ತಿಳಿಸಿದೆ.

ಇದನ್ನೂ ಓದಿ:-ಯಾವ ನವೆಂಬರ್‌ ಕ್ರಾಂತಿಯೂ ಇಲ್ಲ, ಕೇವಲ ಶಾಂತಿಯಷ್ಟೇ ; ಶಾಸಕ ನರೇಂದ್ರಸ್ವಾಮಿ

ಅಕ್ಟೋಬರ್ 6 ರಂದು ವಿಷ್ಣು ವಿಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿಚಾರಣೆ ವೇಳೆಯಲ್ಲಿ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯಲು ವಕೀಲ ರಾಕೇಶ್ ಕಿಶೋರ್ ಯತ್ನಿಸಿದ್ದರು. ಅವರ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಎಸ್‌ಸಿಬಿಎ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.

ಮಾರ್ಗಸೂಚಿ ಪ್ರಕಟಿಸಲು ಕ್ರಮ
ನ್ಯಾಯಾಲಯದಲ್ಲಿ ಘೋಷಣೆ ಕೂಗುವುದು ಮತ್ತು ಶೂ ಎಸೆಯುವುದು ನ್ಯಾಯಾಂಗ ನಿಂದನೆಯ ಸ್ಪಷ್ಟ ಪ್ರಕರಣಗಳಾಗಿವೆ. ಆದರೆ ಇದು ಸಂಬಂಧಪಟ್ಟ ನ್ಯಾಯಾಧೀಶರ ಮೇಲೆ ಅವಲಂಬಿತವಾಗಿದೆ. ಅಂತಹ ಘಟನೆಗಳನ್ನು ತಡೆಯಲು ಮಾರ್ಗಸೂಚಿಗಳನ್ನು ಹಾಕುವುದನ್ನು ಪರಿಗಣಿಸುವುದಾಗಿ ನ್ಯಾಯಾಲಯ ಹೇಳಿದೆ.

Tags:
error: Content is protected !!