ದೇಶ- ವಿದೇಶ

CJIರತ್ತ ಶೂ ಎಸೆತ ಪ್ರಕರಣ : ವಕೀಲ ರಾಕೇಶ್ ವಿರುದ್ಧ ಕ್ರಮ ಕೈಬಿಟ್ಟ ಸುಪ್ರೀಂಕೋರ್ಟ್

ಹೊಸದಿಲ್ಲಿ : ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯ ಕೈಬಿಟ್ಟಿದೆ. ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ ಸೋಮವಾರ ಹೇಳಿದೆ. ಸ್ವತಃ ಸಿಜೆಐ ಅವರೇ ವಕೀಲರ ವಿರುದ್ಧ ಪ್ರಕ್ರಿಯೆ ಮುಂದುವರಿಸಲು ನಿರಾಕರಿಸಿದ್ದಾರೆ.

ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸರ್ವೋಚ್ಚ ನ್ಯಾಯಾಲಯದ ಬಾರ್ ಅಸೋಸಿಯೇಷನ್‌ಗೆ ತಿಳಿಸಿದೆ.

ಇದನ್ನೂ ಓದಿ:-ಯಾವ ನವೆಂಬರ್‌ ಕ್ರಾಂತಿಯೂ ಇಲ್ಲ, ಕೇವಲ ಶಾಂತಿಯಷ್ಟೇ ; ಶಾಸಕ ನರೇಂದ್ರಸ್ವಾಮಿ

ಅಕ್ಟೋಬರ್ 6 ರಂದು ವಿಷ್ಣು ವಿಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿಚಾರಣೆ ವೇಳೆಯಲ್ಲಿ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯಲು ವಕೀಲ ರಾಕೇಶ್ ಕಿಶೋರ್ ಯತ್ನಿಸಿದ್ದರು. ಅವರ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಎಸ್‌ಸಿಬಿಎ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.

ಮಾರ್ಗಸೂಚಿ ಪ್ರಕಟಿಸಲು ಕ್ರಮ
ನ್ಯಾಯಾಲಯದಲ್ಲಿ ಘೋಷಣೆ ಕೂಗುವುದು ಮತ್ತು ಶೂ ಎಸೆಯುವುದು ನ್ಯಾಯಾಂಗ ನಿಂದನೆಯ ಸ್ಪಷ್ಟ ಪ್ರಕರಣಗಳಾಗಿವೆ. ಆದರೆ ಇದು ಸಂಬಂಧಪಟ್ಟ ನ್ಯಾಯಾಧೀಶರ ಮೇಲೆ ಅವಲಂಬಿತವಾಗಿದೆ. ಅಂತಹ ಘಟನೆಗಳನ್ನು ತಡೆಯಲು ಮಾರ್ಗಸೂಚಿಗಳನ್ನು ಹಾಕುವುದನ್ನು ಪರಿಗಣಿಸುವುದಾಗಿ ನ್ಯಾಯಾಲಯ ಹೇಳಿದೆ.

ಆಂದೋಲನ ಡೆಸ್ಕ್

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

2 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

2 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

6 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

6 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

6 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

6 hours ago