ಹೊಸದಿಲ್ಲಿ : ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯ ಕೈಬಿಟ್ಟಿದೆ. ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ ಸೋಮವಾರ ಹೇಳಿದೆ. ಸ್ವತಃ ಸಿಜೆಐ ಅವರೇ ವಕೀಲರ ವಿರುದ್ಧ ಪ್ರಕ್ರಿಯೆ ಮುಂದುವರಿಸಲು ನಿರಾಕರಿಸಿದ್ದಾರೆ.
ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸರ್ವೋಚ್ಚ ನ್ಯಾಯಾಲಯದ ಬಾರ್ ಅಸೋಸಿಯೇಷನ್ಗೆ ತಿಳಿಸಿದೆ.
ಇದನ್ನೂ ಓದಿ:-ಯಾವ ನವೆಂಬರ್ ಕ್ರಾಂತಿಯೂ ಇಲ್ಲ, ಕೇವಲ ಶಾಂತಿಯಷ್ಟೇ ; ಶಾಸಕ ನರೇಂದ್ರಸ್ವಾಮಿ
ಅಕ್ಟೋಬರ್ 6 ರಂದು ವಿಷ್ಣು ವಿಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿಚಾರಣೆ ವೇಳೆಯಲ್ಲಿ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯಲು ವಕೀಲ ರಾಕೇಶ್ ಕಿಶೋರ್ ಯತ್ನಿಸಿದ್ದರು. ಅವರ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಎಸ್ಸಿಬಿಎ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.
ಮಾರ್ಗಸೂಚಿ ಪ್ರಕಟಿಸಲು ಕ್ರಮ
ನ್ಯಾಯಾಲಯದಲ್ಲಿ ಘೋಷಣೆ ಕೂಗುವುದು ಮತ್ತು ಶೂ ಎಸೆಯುವುದು ನ್ಯಾಯಾಂಗ ನಿಂದನೆಯ ಸ್ಪಷ್ಟ ಪ್ರಕರಣಗಳಾಗಿವೆ. ಆದರೆ ಇದು ಸಂಬಂಧಪಟ್ಟ ನ್ಯಾಯಾಧೀಶರ ಮೇಲೆ ಅವಲಂಬಿತವಾಗಿದೆ. ಅಂತಹ ಘಟನೆಗಳನ್ನು ತಡೆಯಲು ಮಾರ್ಗಸೂಚಿಗಳನ್ನು ಹಾಕುವುದನ್ನು ಪರಿಗಣಿಸುವುದಾಗಿ ನ್ಯಾಯಾಲಯ ಹೇಳಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…