ದೇಶ- ವಿದೇಶ

ತಾಯ್ನಾಡಿಗೆ ಮರಳಿದ ಶುಭಾಂಶು : ಅದ್ದೂರಿ ಸ್ವಾಗತ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ಭಾನುವಾರ ಭಾರತಕ್ಕೆ ಮರಳಿದ್ದಾರೆ.

ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದಿಲ್ಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರನ್ನು ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮತ್ತು ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಅದ್ದೂರಿಯಾಗಿ ಸ್ವಾಗತಿಸಿದರು.

“ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬೆಳಗಿನ ಜಾವ ದಿಲ್ಲಿಗೆ ಬಂದಿಳಿದರು. ಇವರೊಂದಿಗೆ ಮತ್ತೊಬ್ಬ ಗಗನಯಾತ್ರಿ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಮರಳಿದರು ಎಂದು ಜಿತೇಂದ್ರ ಸಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶುಕ್ಲಾ ಖಾಸಗಿ ಬಾಹ್ಯಾಕಾಶ ಅಭಿಯಾನ ಆಕ್ಸಿಯಂ-4ರ ತಂಡದ ಇತರ ಮೂವರೊಂದಿಗೆ ಬಾಹ್ಯಾಕಾಶ ಯಾನ ಕೈಗೊಂಡಿದ್ದರು. ಜೂ. 25ರಂದು ಫ್ಲೋರಿಡಾದಿಂದ ಯಾನವನ್ನು ಆರಂಭಿಸಿದ್ದ ಆಕ್ಸಿಯಂ-4 ಜೂ.26ರಂದು ಐಎಸ್ಎಸ್ ತಲುಪಿತ್ತು. ಜು.15ರಂದು ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಗೆ ಬಂದಿಳಿದಿದ್ದರು. ತನ್ನ 18 ದಿನಗಳ ಅಭಿಯಾನದಲ್ಲಿ ಶುಕ್ಲಾ 60ಕ್ಕೂ ಅಧಿಕ ಪ್ರಯೋಗಗಳನ್ನು ಕೈಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

4 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

4 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

5 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

5 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

5 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

6 hours ago