Shubanshu Shukla in space experiment Update
ನವದೆಹಲಿ: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 10 ದಿನಗಳ ವಾಸವನ್ನು ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪೂರೈಸಿದ್ದಾರೆ. ಜೂನ್.26ರಂದು ಇತರೆ ಮೂರು ಗಗನಯಾನಿಗಳ ಜೊತೆ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದರು.
ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ನೀರು ಕರಡಿ ಪ್ರಯೋಗವನ್ನು ಪೂರ್ಣಗೊಳಿಸಿದ್ದಾರೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ತೆ ಈ ಪ್ರಯೋಗ ಸಿದ್ಧಪಡಿಸಿತ್ತು. ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ಶುಭಾಂಶು ಶುಕ್ಲಾ ಐಎಸ್ಎಸ್ನಲ್ಲಿ ನೀರು ಕರಡಿಗಳನ್ನು ಒಳಗೊಂಡ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗವನ್ನು ಪೂರ್ಣಗೊಳಿಸಿದ್ದಾರೆ.
ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾ ಅವರ ಪ್ರಯೋಗಗಳು ಮುಂದುವರಿದಿದ್ದು, ವಿವಿಧ ಸಸಿಗಳ ಬೀಜಗಳು ಮೊಳಕೆಯೊಡೆಯಲು ಅನುವಾಗುವಂತೆ ನೀರನ್ನು ಹನಿಸಿದ್ದಾರೆ. ಬಾಹ್ಯಾಕಾಶ ಯಾನದ ವೇಳೆ ಸೂಕ್ಷ್ಮ ಗುರುತ್ವಾಕರ್ಷಣೆಯು ಸಸಿಗಳ ಬೆಳವಣಿಗೆ ಮೇಗೆ ಹೇಗೆ ಪರಿಣಾಮ ಬೀರುತ್ತದೆ ಎಂದು ತಿಳಿಯಲು ಈ ಅಧ್ಯಯನ ನಡೆಸಲಾಗುತ್ತಿದೆ.
ಇನ್ನು ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಐಎಸ್ಎಸ್ನ ಕಿಟಕಿ ಎಂದೇ ಕರೆಯಲಾಗುವ ಕಪೋಲಾ ರಂದ್ರದಿಂದ ಹೊರ ಪ್ರಪಂಚವನ್ನು ವೀಕ್ಷಿಸುತ್ತಿರುವ ಚಿತ್ರವನ್ನು ನಾಸಾ ಬಿಡುಗಡೆ ಮಾಡಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…