ದೇಶ- ವಿದೇಶ

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾ: ನೀರು ಕರಡಿ ಪ್ರಯೋಗ ಪೂರ್ಣ

ನವದೆಹಲಿ: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 10 ದಿನಗಳ ವಾಸವನ್ನು ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪೂರೈಸಿದ್ದಾರೆ. ಜೂನ್.‌26ರಂದು ಇತರೆ ಮೂರು ಗಗನಯಾನಿಗಳ ಜೊತೆ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದರು.

ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ನೀರು ಕರಡಿ ಪ್ರಯೋಗವನ್ನು ಪೂರ್ಣಗೊಳಿಸಿದ್ದಾರೆ.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ತೆ ಈ ಪ್ರಯೋಗ ಸಿದ್ಧಪಡಿಸಿತ್ತು. ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ನೀರು ಕರಡಿಗಳನ್ನು ಒಳಗೊಂಡ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗವನ್ನು ಪೂರ್ಣಗೊಳಿಸಿದ್ದಾರೆ.

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾ ಅವರ ಪ್ರಯೋಗಗಳು ಮುಂದುವರಿದಿದ್ದು, ವಿವಿಧ ಸಸಿಗಳ ಬೀಜಗಳು ಮೊಳಕೆಯೊಡೆಯಲು ಅನುವಾಗುವಂತೆ ನೀರನ್ನು ಹನಿಸಿದ್ದಾರೆ. ಬಾಹ್ಯಾಕಾಶ ಯಾನದ ವೇಳೆ ಸೂಕ್ಷ್ಮ ಗುರುತ್ವಾಕರ್ಷಣೆಯು ಸಸಿಗಳ ಬೆಳವಣಿಗೆ ಮೇಗೆ ಹೇಗೆ ಪರಿಣಾಮ ಬೀರುತ್ತದೆ ಎಂದು ತಿಳಿಯಲು ಈ ಅಧ್ಯಯನ ನಡೆಸಲಾಗುತ್ತಿದೆ.

ಇನ್ನು ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಐಎಸ್‌ಎಸ್‌ನ ಕಿಟಕಿ ಎಂದೇ ಕರೆಯಲಾಗುವ ಕಪೋಲಾ ರಂದ್ರದಿಂದ ಹೊರ ಪ್ರಪಂಚವನ್ನು ವೀಕ್ಷಿಸುತ್ತಿರುವ ಚಿತ್ರವನ್ನು ನಾಸಾ ಬಿಡುಗಡೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

14 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago