ದೇಶ- ವಿದೇಶ

ಭೂಮಿಯ ಮೇಲೆ ನಡೆಯಲು ಕಲಿಯುತ್ತಿರುವ ಶುಭಾಂಶು ಶುಕ್ಲಾ

ನವದೆಹಲಿ: ಬಾಹ್ಯಾಕಾಶದಲ್ಲಿ 18 ದಿನ ಕಳೆದು ವಾಪಸ್ ಆದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭೂಮಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಳೆದ ವಾರ ಯಶಸ್ವಿ ಬಾಹ್ಯಾಕಾಶ ಯಾನದಿಂದ ಹಿಂದಿರುಗಿದ ಭಾರತೀಯ ಗಗನಯಾತ್ರಿ ಶುಕ್ಲಾ, ಭೂಮಿಯ ಮೇಲೆ ನಡೆಯಲು ಕಲಿಯುತ್ತಿದ್ದಾರೆ.

ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಜೂನ್.25 ರಂದು ಸ್ಪೇಸ್‍ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಾಟ ನಡೆಸಿದ ನಾಲ್ವರು ಗಗನಯಾತ್ರಿಗಳು ಶುಕ್ಲಾ ಕೂಡ ಒಬ್ಬರಾಗಿದ್ದರು.‌

ಐಎಸ್‍ಎಸ್‍ನಲ್ಲಿ ಸುಮಾರು 18 ದಿನಗಳನ್ನು ಕಳೆದ ನಂತರ ಅವರು ಜುಲೈ.15ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದರು. ಶುಕ್ಲಾ ಅವರು ಮತ್ತೆ ನಡೆಯಲು ಪ್ರಯತ್ನಿಸುತ್ತಿರುವ ಮತ್ತು ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳುತ್ತಿರುವ ವೀಡಿಯೊವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

ಪುಟ್ಟ ಮಕ್ಕಳು ಆಗ ತಾನೆ ನಡೆಯುವುದನ್ನು ಕಲಿಯುತ್ತಿರುವಂತೆ ಇರುವ ದೃಶ್ಯ ವೀಡಿಯೋದಲ್ಲಿದೆ. ಶುಕ್ಲಾ ಅವರು ನಡೆಯಲು ಇಬ್ಬರು ಸಹಾಯ ಮಾಡುತ್ತಿದ್ದಾರೆ. ಬೇಗ ಚೇತರಿಸಿಕೊಳ್ಳಿ ಎಂದು ನನಗೆ ಅನೇಕರು ಸಂದೇಶ ಕಳುಹಿಸುತ್ತಿದ್ದಾರೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ನಿಮಗೆಲ್ಲರಿಗೂ ಧನ್ಯವಾದ ಎಂದಿದ್ದಾರೆ.

ಗುರುತ್ವಾಕರ್ಷಣೆ ಇಲ್ಲದ ವಾತಾವರಣಕ್ಕೆ ನನ್ನ ದೇಹ ಒಗ್ಗಿಕೊಂಡಿತ್ತು. ಈಗ ಗುರುತ್ವಾಕರ್ಷಣೆಗೆ ಮರಳಿದಾಗ, ಇಲ್ಲಿಗೆ ಮತ್ತೆ ಹೊಂದಿಕೊಳ್ಳಬೇಕು. ನನ್ನ ದೇಹ ಬಹುಬೇಗ ಭೂಮಿ ವಾತಾವರಣಕ್ಕೆ ಹೊಂದಿಕೊಳ್ಳುತ್ತಿರುವುದನ್ನು ಕಂಡು ನನಗೆ ಅಚ್ಚರಿಯಾಯಿತು ಎಂದು ಶುಕ್ಲಾ ತಿಳಿಸಿದ್ದಾರೆ. ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳು ವೈದ್ಯಕೀಯ ಮತ್ತು ಮರು-ಹೊಂದಾಣಿಕೆ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲು ಇಂದಿನವರೆಗೆ ಕ್ವಾರಂಟೈನ್‍ನಲ್ಲಿ ಇದ್ದರು.

 

 

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago