Shubhamshu shukla
ನವದೆಹಲಿ: ಬಾಹ್ಯಾಕಾಶದಲ್ಲಿ 18 ದಿನ ಕಳೆದು ವಾಪಸ್ ಆದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭೂಮಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ಕಳೆದ ವಾರ ಯಶಸ್ವಿ ಬಾಹ್ಯಾಕಾಶ ಯಾನದಿಂದ ಹಿಂದಿರುಗಿದ ಭಾರತೀಯ ಗಗನಯಾತ್ರಿ ಶುಕ್ಲಾ, ಭೂಮಿಯ ಮೇಲೆ ನಡೆಯಲು ಕಲಿಯುತ್ತಿದ್ದಾರೆ.
ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಜೂನ್.25 ರಂದು ಸ್ಪೇಸ್ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಾಟ ನಡೆಸಿದ ನಾಲ್ವರು ಗಗನಯಾತ್ರಿಗಳು ಶುಕ್ಲಾ ಕೂಡ ಒಬ್ಬರಾಗಿದ್ದರು.
ಐಎಸ್ಎಸ್ನಲ್ಲಿ ಸುಮಾರು 18 ದಿನಗಳನ್ನು ಕಳೆದ ನಂತರ ಅವರು ಜುಲೈ.15ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದರು. ಶುಕ್ಲಾ ಅವರು ಮತ್ತೆ ನಡೆಯಲು ಪ್ರಯತ್ನಿಸುತ್ತಿರುವ ಮತ್ತು ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳುತ್ತಿರುವ ವೀಡಿಯೊವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಪುಟ್ಟ ಮಕ್ಕಳು ಆಗ ತಾನೆ ನಡೆಯುವುದನ್ನು ಕಲಿಯುತ್ತಿರುವಂತೆ ಇರುವ ದೃಶ್ಯ ವೀಡಿಯೋದಲ್ಲಿದೆ. ಶುಕ್ಲಾ ಅವರು ನಡೆಯಲು ಇಬ್ಬರು ಸಹಾಯ ಮಾಡುತ್ತಿದ್ದಾರೆ. ಬೇಗ ಚೇತರಿಸಿಕೊಳ್ಳಿ ಎಂದು ನನಗೆ ಅನೇಕರು ಸಂದೇಶ ಕಳುಹಿಸುತ್ತಿದ್ದಾರೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ನಿಮಗೆಲ್ಲರಿಗೂ ಧನ್ಯವಾದ ಎಂದಿದ್ದಾರೆ.
ಗುರುತ್ವಾಕರ್ಷಣೆ ಇಲ್ಲದ ವಾತಾವರಣಕ್ಕೆ ನನ್ನ ದೇಹ ಒಗ್ಗಿಕೊಂಡಿತ್ತು. ಈಗ ಗುರುತ್ವಾಕರ್ಷಣೆಗೆ ಮರಳಿದಾಗ, ಇಲ್ಲಿಗೆ ಮತ್ತೆ ಹೊಂದಿಕೊಳ್ಳಬೇಕು. ನನ್ನ ದೇಹ ಬಹುಬೇಗ ಭೂಮಿ ವಾತಾವರಣಕ್ಕೆ ಹೊಂದಿಕೊಳ್ಳುತ್ತಿರುವುದನ್ನು ಕಂಡು ನನಗೆ ಅಚ್ಚರಿಯಾಯಿತು ಎಂದು ಶುಕ್ಲಾ ತಿಳಿಸಿದ್ದಾರೆ. ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳು ವೈದ್ಯಕೀಯ ಮತ್ತು ಮರು-ಹೊಂದಾಣಿಕೆ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲು ಇಂದಿನವರೆಗೆ ಕ್ವಾರಂಟೈನ್ನಲ್ಲಿ ಇದ್ದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…