ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಕ್ತಪೂರ್ವಕ ನಮನ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ ಭಾವಪೂರ್ಣ ಸಂದೇಶ ಹಂಚಿಕೊಂಡಿದ್ದಾರೆ.
ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ನನ್ನ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ ಮತ್ತು ಅಚಲ ಸೇವೆಯ ಸಂಕೇತವಾಗಿ ಅವರು ಜನರ ಸ್ಮೃತಿಯಲ್ಲಿ ಸದಾ ನೆಲೆಸಿದ್ದಾರೆ ಎಂದು ಬಣ್ಣಿಸಿದ್ದಾರೆ.
ಇತರರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಶ್ರೀಗಳು, ನಿಜವಾದ ಶ್ರೇಷ್ಠತೆಯ ಸೇವೆಯಲ್ಲಿ ಅಡಗಿದೆ ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಮಾತ್ಮಿಕ ಕ್ಷೇತ್ರಗಳಲ್ಲಿ ಅವರು ನೀಡಿದ ಕೊಡುಗೆಗಳು ಸಮಾಜದ ಮೇಲೆ ಶಾಶ್ವತವಾದ ಛಾಪನ್ನು ಮೂಡಿಸಿವೆ ಎಂದು ಶ್ಲಾಘಿಸಿದ್ದಾರೆ.
ಇಂದಿಗೂ ಅವರ ಜೀವನವು ಅಸಂಖ್ಯಾತ ಜನರಿಗೆ ನಿಸ್ವಾರ್ಥ ಮತ್ತು ಸೇವೆಯ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತಿದೆ ಹಾಗೂ ನಿರಂತರ ಪ್ರೇರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…