ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಕ್ತಪೂರ್ವಕ ನಮನ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ ಭಾವಪೂರ್ಣ ಸಂದೇಶ ಹಂಚಿಕೊಂಡಿದ್ದಾರೆ.
ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ನನ್ನ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ ಮತ್ತು ಅಚಲ ಸೇವೆಯ ಸಂಕೇತವಾಗಿ ಅವರು ಜನರ ಸ್ಮೃತಿಯಲ್ಲಿ ಸದಾ ನೆಲೆಸಿದ್ದಾರೆ ಎಂದು ಬಣ್ಣಿಸಿದ್ದಾರೆ.
ಇತರರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಶ್ರೀಗಳು, ನಿಜವಾದ ಶ್ರೇಷ್ಠತೆಯ ಸೇವೆಯಲ್ಲಿ ಅಡಗಿದೆ ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಮಾತ್ಮಿಕ ಕ್ಷೇತ್ರಗಳಲ್ಲಿ ಅವರು ನೀಡಿದ ಕೊಡುಗೆಗಳು ಸಮಾಜದ ಮೇಲೆ ಶಾಶ್ವತವಾದ ಛಾಪನ್ನು ಮೂಡಿಸಿವೆ ಎಂದು ಶ್ಲಾಘಿಸಿದ್ದಾರೆ.
ಇಂದಿಗೂ ಅವರ ಜೀವನವು ಅಸಂಖ್ಯಾತ ಜನರಿಗೆ ನಿಸ್ವಾರ್ಥ ಮತ್ತು ಸೇವೆಯ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತಿದೆ ಹಾಗೂ ನಿರಂತರ ಪ್ರೇರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…