ದೇಶ- ವಿದೇಶ

ಬಿಹಾರ | ರಾಹುಲ್‌ ಅಧಿಕಾರ ಯಾತ್ರೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ

ಬೆಂಗಳೂರು : ಬಿಹಾರದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಮತದಾನ ಅಧಿಕಾರ ಯಾತ್ರೆ ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಯಾತ್ರೆಯಲ್ಲಿ ಭಾಗವಹಿಸಿದ್ದರು.‌

ಬೆಂಗಳೂರಿನಿಂದ ಸಚಿವರಾದ ಕೆ.ಜೆ. ಜಾರ್ಜ್, ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ. ಎಂ.ಸಿ. ಸುಧಾಕರ್, ಜಮೀರ್ ಅಹಮದ್ಖಾನ್, ಹಿರಿಯ ಕಾಂಗ್ರೆಸ್ಸಿಗರಾದ ಬಿ.ಕೆ.ಹರಿಪ್ರಸಾದ್, ವಿಧಾನಪರಿಷತ್ ಸದಸ್ಯರಾದ ಸಲೀಮ್ ಅಹಮದ್, ಯತೀಂದ್ರ ಸಿದ್ದರಾಮಯ್ಯ, ಶಾಸಕ ಎ.ಎಸ್.ಪೊನ್ನಣ್ಣ ಸೇರಿದಂತೆ 20 ಮಂದಿ ಶಾಸಕರು, ಸಚಿವರ ನಿಯೋಗದೊಂದಿಗೆ ಉತ್ತರ ಪ್ರದೇಶದ ಗೋರಖ್ಪುರ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಬಿಹಾರದ ಗೋಪಾಲ್ಗಂಜ್ಗೆ ರಸ್ತೆ ಮೂಲಕ ಪ್ರಯಾಣ ಬೆಳೆಸಿದರು.

ಬಿಹಾರದಲ್ಲಿ ರಾಹುಲ್ ಗಾಂಧಿ ಅವರ ಜೊತೆ ಯಾತ್ರೆ ಹಾಗೂ ಸಾರ್ವಜನಿಕ ಸಮಾವೇಶದಲ್ಲಿ ಸಿದ್ದರಾಮಯ್ಯ ನೇತೃತ್ವ ತಂಡ ಭಾಗವಹಿಸಿತ್ತು. ಬಿಹಾರಕ್ಕೆ ತೆರಳಿದ ಸಿದ್ದರಾಮಯ್ಯ ಅವರಿಗೆ ಅಲ್ಲಿನ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ಹಿಂದುಳಿದ ವರ್ಗಗಳ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲೇಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಬೇರೆ ಬೇರೆ ರಾಜ್ಯಗಳಿಂದ ಮುಖಂಡರನ್ನು ಆಹ್ವಾನಿಸಿ, ರಾಹುಲ್ ಗಾಂಧಿ ಅವರ ಯಾತ್ರೆಗೆ ಬಲ ತುಂಬುವ ಪ್ರಯತ್ನ ಮಾಡುತ್ತಿದೆ. ರಾಹುಲ್ ಗಾಂಧಿ ಅವರ ಯಾತ್ರೆಗೆ ಭಾರಿ ಪ್ರಮಾಣದಲ್ಲಿ ಸೇರುತ್ತಿದ್ದು, ಇದು ಕಾಂಗ್ರೆಸ್ ಪಕ್ಷಕ್ಕೆ ಅಚ್ಚರಿ ಉಂಟುಮಾಡುತ್ತಿದೆ. ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಹೋರಾಟ ಆರಂಭಿಸಿದ್ದಾರೆ.

ಈ ಮೊದಲು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಾತ್ರೆಯಲ್ಲಿ ಭಾಗವಹಿಸಿದ್ದರು. ಅವರ ನಂತರ ಸಿದ್ದರಾಮಯ್ಯ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಬಿಹಾರದ ಚಂಪಾರಣ್, ಮಂಗಳಪುರ, ಗೋಪಾಲ್ಗಂಜ್, ಶಿವಾನ್ ಸೇರಿದಂತೆ ಹಲವು ಭಾಗಗಳಲ್ಲಿ ರಾಹುಲ್ಗಾಂಧಿ ಅವರ ಯಾತ್ರೆ ಸಾಗಿದೆ.

ಒಂದು ಕಾಲದಲ್ಲಿ ಸಿದ್ದರಾಮಯ್ಯ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಜನತಾ ಪರಿವಾರದಲ್ಲಿದ್ದವರು ಹಾಗೂ ಪರಸ್ಪರ ಉತ್ತಮ ಸ್ನೇಹಿತರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿಯಲ್ಲಿ ನಿತೀಶ್ ಕುಮಾರ್ ಬಿಜೆಪಿ ಮೈತ್ರಿಯಲ್ಲಿದ್ದು, ಸಿದ್ದರಾಮಯ್ಯ ತಮ್ಮ ಹಳೆಯ ಸ್ನೇಹಿತನ ವಿರುದ್ಧವೇ ಬಿಹಾರದಲ್ಲಿ ಪ್ರಚಾರದ ಅಖಾಡಕ್ಕೆ ಇಳಿಯುವಂತಾಗಿದೆ.

ಆಂದೋಲನ ಡೆಸ್ಕ್

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

4 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

5 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

6 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

6 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

7 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

7 hours ago