ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ ವ್ಯಾಪಾರ ಒಪ್ಪಂದʼಕ್ಕೆ ಸಹಿ ಹಾಕಲಾಯಿತು. ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್ಲೇ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಈ ಒಪ್ಪಂದದಿಂದ ಭಾರತದ ಎಲ್ಲ ಉತ್ಪನ್ನಗಳಿಗೆ ನ್ಯೂಜಿಲೆಂಡ್ ಮಾರುಕಟ್ಟೆಯಲ್ಲಿ ಶೇ.100ರಷ್ಟು ಸುಂಕ ರಹಿತ ಪ್ರವೇಶದ ಜತೆಗೆ ಮುಂದಿನ 15 ವರ್ಷಗಳಲ್ಲಿ ನ್ಯೂಜಿಲೆಂಡ್ ಭಾರತದಲ್ಲಿ 20 ಬಿಲಿಯನ್ ಡಾಲರ್(1.88ಲಕ್ಷ ಕೋಟಿ) ಹೂಡಿಕೆ ಮಾಡಲು ನಿರ್ಧರಿಸಲಿದೆ. ಮೂಲಸೌಕರ್ಯ, ನವೀಕರಿಸಬಹುದಾದ ಇಂಧನ, ಕೃಷಿ, ತಂತ್ರಜ್ಞಾನ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ.
ಐಟಿ, ಎಂಜಿನಿಯರಿಂಗ್, ಆರೋಗ್ಯ ಕ್ಷೇತ್ರದ ನುರಿತ ವೃತ್ತಿಪರರು, ಜೊತೆಗೆ ಆಯುಷ್ ವೈದ್ಯರು, ಯೋಗ ಬೋಧಕರು, ಭಾರತೀಯ ಬಾಣಸಿಗರಿಗೆ ವಾರ್ಷಿಕ 5,000 ತಾತ್ಕಾಲಿಕ ಉದ್ಯೋಗ ವೀಸಾ ಮೀಸಲು. ವೀಸಾ ಅವಧಿ ಮೂರು ವರ್ಷಗಳವರೆಗೆ ಇರಲಿದೆ. ಭಾರತೀಯ ವಿದ್ಯಾರ್ಥಿಗಳು ವಾರಕ್ಕೆ 20 ಗಂಟೆ ಕೆಲಸ ಮಾಡಬಹುದು. STEM ಪದವೀಧರರಿಗೆ 3 ವರ್ಷ, ಪಿಎಚ್ಡಿ ವಿದ್ಯಾರ್ಥಿಗಳಿಗೆ 4 ವರ್ಷ ಪೋಸ್ಟ್-ಸ್ಟಡಿ ವರ್ಕ್ ವೀಸಾ ಸಿಗಲಿದೆ.
ಯಾವ ಕ್ಷೇತ್ರಗಳಿಗೆ ಲಾಭ?
ಚರ್ಮ ಮತ್ತು ಪಾದರಕ್ಷೆ ಮೇಲಿನ ಶೇ.5ರಷ್ಟು ಸುಂಕ ರದ್ದಾಗಿದ್ದು, ಆಗ್ರಾ ಕೇಂದ್ರಕ್ಕೆ ದೊಡ್ಡ ಉತ್ತೇಜನ ಸಿಗಲಿದೆ. ಜವಳಿ ಮೇಲಿನ ಶೇ.10ರಷ್ಟು ಸುಂಕ ತೆರವಾದರೆ, ಔಷಧ ಕಂಪನಿಗಳಿಗೆ ಅನುಸರಣೆ ವೆಚ್ಚ ಕಡಿಮೆಯಾಗಲಿದೆ.
ಇತ್ತ ನ್ಯೂಜಿಲೆಂಡ್ನ ಉಣ್ಣೆ, ವೈನ್, ಮರ, ಕಲ್ಲಿದ್ದಲು, ಆವಕಾಡೊ, ಬ್ಲೂಬೆರ್ರಿಗಳಿಗೆ ಭಾರತದ ಮಾರುಕಟ್ಟೆ ತೆರೆಯಲಿದೆ. ಕಿವಿ, ಸೇಬು ಬೆಳೆ ಮತ್ತು ಜೇನು ಉತ್ಪಾದನೆಯಲ್ಲಿ ಭಾರತೀಯ ರೈತರಿಗೆ ಸಹಕಾರ ನೀಡಲಾಗುವುದು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…