ದೇಶ- ವಿದೇಶ

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ ವ್ಯಾಪಾರ ಒಪ್ಪಂದʼಕ್ಕೆ ಸಹಿ ಹಾಕಲಾಯಿತು. ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್‌ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್ಲೇ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದದಿಂದ ಭಾರತದ ಎಲ್ಲ ಉತ್ಪನ್ನಗಳಿಗೆ ನ್ಯೂಜಿಲೆಂಡ್ ಮಾರುಕಟ್ಟೆಯಲ್ಲಿ ಶೇ.100ರಷ್ಟು ಸುಂಕ ರಹಿತ ಪ್ರವೇಶದ ಜತೆಗೆ ಮುಂದಿನ 15 ವರ್ಷಗಳಲ್ಲಿ ನ್ಯೂಜಿಲೆಂಡ್ ಭಾರತದಲ್ಲಿ 20 ಬಿಲಿಯನ್ ಡಾಲರ್(‌1.88ಲಕ್ಷ ಕೋಟಿ) ಹೂಡಿಕೆ ಮಾಡಲು ನಿರ್ಧರಿಸಲಿದೆ. ಮೂಲಸೌಕರ್ಯ, ನವೀಕರಿಸಬಹುದಾದ ಇಂಧನ, ಕೃಷಿ, ತಂತ್ರಜ್ಞಾನ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ.

ಐಟಿ, ಎಂಜಿನಿಯರಿಂಗ್, ಆರೋಗ್ಯ ಕ್ಷೇತ್ರದ ನುರಿತ ವೃತ್ತಿಪರರು, ಜೊತೆಗೆ ಆಯುಷ್ ವೈದ್ಯರು, ಯೋಗ ಬೋಧಕರು, ಭಾರತೀಯ ಬಾಣಸಿಗರಿಗೆ ವಾರ್ಷಿಕ 5,000 ತಾತ್ಕಾಲಿಕ ಉದ್ಯೋಗ ವೀಸಾ ಮೀಸಲು. ವೀಸಾ ಅವಧಿ ಮೂರು ವರ್ಷಗಳವರೆಗೆ ಇರಲಿದೆ. ಭಾರತೀಯ ವಿದ್ಯಾರ್ಥಿಗಳು ವಾರಕ್ಕೆ 20 ಗಂಟೆ ಕೆಲಸ ಮಾಡಬಹುದು. STEM ಪದವೀಧರರಿಗೆ 3 ವರ್ಷ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ 4 ವರ್ಷ ಪೋಸ್ಟ್-ಸ್ಟಡಿ ವರ್ಕ್ ವೀಸಾ ಸಿಗಲಿದೆ.

ಯಾವ ಕ್ಷೇತ್ರಗಳಿಗೆ ಲಾಭ?
ಚರ್ಮ ಮತ್ತು ಪಾದರಕ್ಷೆ ಮೇಲಿನ ಶೇ.5ರಷ್ಟು ಸುಂಕ ರದ್ದಾಗಿದ್ದು, ಆಗ್ರಾ ಕೇಂದ್ರಕ್ಕೆ ದೊಡ್ಡ ಉತ್ತೇಜನ ಸಿಗಲಿದೆ. ಜವಳಿ ಮೇಲಿನ ಶೇ.10ರಷ್ಟು ಸುಂಕ ತೆರವಾದರೆ, ಔಷಧ ಕಂಪನಿಗಳಿಗೆ ಅನುಸರಣೆ ವೆಚ್ಚ ಕಡಿಮೆಯಾಗಲಿದೆ.

ಇತ್ತ ನ್ಯೂಜಿಲೆಂಡ್‌ನ ಉಣ್ಣೆ, ವೈನ್, ಮರ, ಕಲ್ಲಿದ್ದಲು, ಆವಕಾಡೊ, ಬ್ಲೂಬೆರ್ರಿಗಳಿಗೆ ಭಾರತದ ಮಾರುಕಟ್ಟೆ ತೆರೆಯಲಿದೆ. ಕಿವಿ, ಸೇಬು ಬೆಳೆ ಮತ್ತು ಜೇನು ಉತ್ಪಾದನೆಯಲ್ಲಿ ಭಾರತೀಯ ರೈತರಿಗೆ ಸಹಕಾರ ನೀಡಲಾಗುವುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago