ದೇಶ- ವಿದೇಶ

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ ವ್ಯಾಪಾರ ಒಪ್ಪಂದʼಕ್ಕೆ ಸಹಿ ಹಾಕಲಾಯಿತು. ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್‌ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್ಲೇ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದದಿಂದ ಭಾರತದ ಎಲ್ಲ ಉತ್ಪನ್ನಗಳಿಗೆ ನ್ಯೂಜಿಲೆಂಡ್ ಮಾರುಕಟ್ಟೆಯಲ್ಲಿ ಶೇ.100ರಷ್ಟು ಸುಂಕ ರಹಿತ ಪ್ರವೇಶದ ಜತೆಗೆ ಮುಂದಿನ 15 ವರ್ಷಗಳಲ್ಲಿ ನ್ಯೂಜಿಲೆಂಡ್ ಭಾರತದಲ್ಲಿ 20 ಬಿಲಿಯನ್ ಡಾಲರ್(‌1.88ಲಕ್ಷ ಕೋಟಿ) ಹೂಡಿಕೆ ಮಾಡಲು ನಿರ್ಧರಿಸಲಿದೆ. ಮೂಲಸೌಕರ್ಯ, ನವೀಕರಿಸಬಹುದಾದ ಇಂಧನ, ಕೃಷಿ, ತಂತ್ರಜ್ಞಾನ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ.

ಐಟಿ, ಎಂಜಿನಿಯರಿಂಗ್, ಆರೋಗ್ಯ ಕ್ಷೇತ್ರದ ನುರಿತ ವೃತ್ತಿಪರರು, ಜೊತೆಗೆ ಆಯುಷ್ ವೈದ್ಯರು, ಯೋಗ ಬೋಧಕರು, ಭಾರತೀಯ ಬಾಣಸಿಗರಿಗೆ ವಾರ್ಷಿಕ 5,000 ತಾತ್ಕಾಲಿಕ ಉದ್ಯೋಗ ವೀಸಾ ಮೀಸಲು. ವೀಸಾ ಅವಧಿ ಮೂರು ವರ್ಷಗಳವರೆಗೆ ಇರಲಿದೆ. ಭಾರತೀಯ ವಿದ್ಯಾರ್ಥಿಗಳು ವಾರಕ್ಕೆ 20 ಗಂಟೆ ಕೆಲಸ ಮಾಡಬಹುದು. STEM ಪದವೀಧರರಿಗೆ 3 ವರ್ಷ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ 4 ವರ್ಷ ಪೋಸ್ಟ್-ಸ್ಟಡಿ ವರ್ಕ್ ವೀಸಾ ಸಿಗಲಿದೆ.

ಯಾವ ಕ್ಷೇತ್ರಗಳಿಗೆ ಲಾಭ?
ಚರ್ಮ ಮತ್ತು ಪಾದರಕ್ಷೆ ಮೇಲಿನ ಶೇ.5ರಷ್ಟು ಸುಂಕ ರದ್ದಾಗಿದ್ದು, ಆಗ್ರಾ ಕೇಂದ್ರಕ್ಕೆ ದೊಡ್ಡ ಉತ್ತೇಜನ ಸಿಗಲಿದೆ. ಜವಳಿ ಮೇಲಿನ ಶೇ.10ರಷ್ಟು ಸುಂಕ ತೆರವಾದರೆ, ಔಷಧ ಕಂಪನಿಗಳಿಗೆ ಅನುಸರಣೆ ವೆಚ್ಚ ಕಡಿಮೆಯಾಗಲಿದೆ.

ಇತ್ತ ನ್ಯೂಜಿಲೆಂಡ್‌ನ ಉಣ್ಣೆ, ವೈನ್, ಮರ, ಕಲ್ಲಿದ್ದಲು, ಆವಕಾಡೊ, ಬ್ಲೂಬೆರ್ರಿಗಳಿಗೆ ಭಾರತದ ಮಾರುಕಟ್ಟೆ ತೆರೆಯಲಿದೆ. ಕಿವಿ, ಸೇಬು ಬೆಳೆ ಮತ್ತು ಜೇನು ಉತ್ಪಾದನೆಯಲ್ಲಿ ಭಾರತೀಯ ರೈತರಿಗೆ ಸಹಕಾರ ನೀಡಲಾಗುವುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

32 mins ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

33 mins ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

33 mins ago

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…

34 mins ago

ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್: ಮೈಸೂರಿನಿಂದ ಹೊರಡಲಿದೆ ವಿಶೇಷ ರೈಲು

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ…

35 mins ago

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

4 hours ago