ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ ಗಮನಾರ್ಹ ಕುಸಿತ ಕಂಡವು. ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ನಲ್ಲಿ ವಹಿವಾಟು ಪ್ರಾರಂಭವಾದ ತಕ್ಷಣ ಎರಡೂ ಅಮೂಲ್ಯ ಲೋಹಗಳ ಬೆಲೆಯಲ್ಲಿ ಭಾರಿ ಕುಸಿತ ಕಂಡು ಬಂದಿದೆ.
ಇದು ಮಾರುಕಟ್ಟೆಯಲ್ಲಿ ಹೂಡಿಕೆದಾರರನ್ನು ಅಚ್ಚರಿಗೊಳಿಸಿತು. ಬೆಳ್ಳಿ ಪ್ರತಿ ಕೆಜಿಗೆ ಸುಮಾರು 20,000 ರೂ. ಕಡಿಮೆಯಾದರೆ, ಚಿನ್ನದ ಬೆಲೆ ಕೂಡ 10 ಗ್ರಾಂಗೆ 4,000 ರೂ.ಗಿಂತ ಹೆಚ್ಚು ಇಳಿಕೆ ದಾಖಲಿಸಿದೆ. ಬೆಳ್ಳಿ ಆರಂಭಿಕ ಹಂತದಲ್ಲಿ ತೀವ್ರವಾಗಿ ಕುಸಿತ ಕಂಡಿತು. ಬೆಳ್ಳಿ ಬುಧವಾರ ಪ್ರತಿ ಕೆಜಿಗೆ 3,25,602 ರೂ.ಗೆ ಮುಕ್ತಾಯಗೊಂಡಿತ್ತು. ಗುರುವಾರ ಬೆಳಗ್ಗೆ ಮಾರುಕಟ್ಟೆ ಆರಂಭವಾದ ತಕ್ಷಣ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 3,05,753 ರೂ.ಗೆ ಇಳಿಕೆ ದಾಖಲಿಸಿತು. ಒಂದೇ ಬಾರಿಗೆ ಪ್ರತಿ ಕೆಜಿಗೆ ಸುಮಾರು 19,849 ರಷ್ಟು ಕುಸಿತ ಕಂಡಿತು. ಇತ್ತೀಚಿನ ದಿನಗಳಲ್ಲಿ ತೀವ್ರ ಏರಿಕೆಯ ನಂತರ ಆದ ಅತಿ ದೊಡ್ಡ ಕುಸಿತವಿದು.
ಚಿನ್ನದ ಬೆಲೆಯಲ್ಲೂ ಭಾರಿ ಕುಸಿತ
ಬೆಳ್ಳಿಯ ಜೊತೆಗೆ ಚಿನ್ನದ ಬೆಲೆಗಳು ಸಹ ತೀವ್ರ ಕುಸಿತ ಕಂಡಿವೆ. ಕಳೆದ ಮೂರು ವಹಿವಾಟಿನಲ್ಲಿ ಚಿನ್ನವು ನಿರಂತರ ಏರಿಕೆ ದಾಖಲಿಸಿತ್ತು. ಈ ಮೂಲಕ ಬಂಗಾರ ಜೀವಿತಾವಽಯ ಹೊಸ ಗರಿಷ್ಠ ಮಟ್ಟವನ್ನು ತಲುಪಿತ್ತು. ಬುಧವಾರ ಫೆಬ್ರವರಿ 5 ರ ಫ್ಯೂಚರ್ ವಹಿವಾಟಿನಲ್ಲಿ 10 ಗ್ರಾಂಗೆ 1,52,862ಕ್ಕೆ ಮುಕ್ತಾಯಗೊಂಡಿತ್ತು. ಆದಾಗ್ಯೂ ಗುರುವಾರ ಇದು 10 ಗ್ರಾಂಗೆ 1,48,777 ಕ್ಕೆ ಇಳಿದಿದೆ. ಈ ಮೂಲಕ ಬಂಗಾರ ಇಂದಿನ ವಹಿವಾಟಿನಲ್ಲಿ ಸುಮಾರು 4,085ರಷ್ಟು ಇಳಿಕೆ ಕಂಡು ಮಧ್ಯಮ ವರ್ಗ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…