ದೇಶ- ವಿದೇಶ

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ ಗಮನಾರ್ಹ ಕುಸಿತ ಕಂಡವು. ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ ವಹಿವಾಟು ಪ್ರಾರಂಭವಾದ ತಕ್ಷಣ ಎರಡೂ ಅಮೂಲ್ಯ ಲೋಹಗಳ ಬೆಲೆಯಲ್ಲಿ ಭಾರಿ ಕುಸಿತ ಕಂಡು ಬಂದಿದೆ.

ಇದು ಮಾರುಕಟ್ಟೆಯಲ್ಲಿ ಹೂಡಿಕೆದಾರರನ್ನು ಅಚ್ಚರಿಗೊಳಿಸಿತು. ಬೆಳ್ಳಿ ಪ್ರತಿ ಕೆಜಿಗೆ ಸುಮಾರು 20,000 ರೂ. ಕಡಿಮೆಯಾದರೆ, ಚಿನ್ನದ ಬೆಲೆ ಕೂಡ 10 ಗ್ರಾಂಗೆ 4,000 ರೂ.ಗಿಂತ ಹೆಚ್ಚು ಇಳಿಕೆ ದಾಖಲಿಸಿದೆ. ಬೆಳ್ಳಿ ಆರಂಭಿಕ ಹಂತದಲ್ಲಿ ತೀವ್ರವಾಗಿ ಕುಸಿತ ಕಂಡಿತು. ಬೆಳ್ಳಿ ಬುಧವಾರ ಪ್ರತಿ ಕೆಜಿಗೆ 3,25,602 ರೂ.ಗೆ ಮುಕ್ತಾಯಗೊಂಡಿತ್ತು. ಗುರುವಾರ ಬೆಳಗ್ಗೆ ಮಾರುಕಟ್ಟೆ ಆರಂಭವಾದ ತಕ್ಷಣ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 3,05,753 ರೂ.ಗೆ ಇಳಿಕೆ ದಾಖಲಿಸಿತು. ಒಂದೇ ಬಾರಿಗೆ ಪ್ರತಿ ಕೆಜಿಗೆ ಸುಮಾರು 19,849 ರಷ್ಟು ಕುಸಿತ ಕಂಡಿತು. ಇತ್ತೀಚಿನ ದಿನಗಳಲ್ಲಿ ತೀವ್ರ ಏರಿಕೆಯ ನಂತರ ಆದ ಅತಿ ದೊಡ್ಡ ಕುಸಿತವಿದು.

ಚಿನ್ನದ ಬೆಲೆಯಲ್ಲೂ ಭಾರಿ ಕುಸಿತ
ಬೆಳ್ಳಿಯ ಜೊತೆಗೆ ಚಿನ್ನದ ಬೆಲೆಗಳು ಸಹ ತೀವ್ರ ಕುಸಿತ ಕಂಡಿವೆ. ಕಳೆದ ಮೂರು ವಹಿವಾಟಿನಲ್ಲಿ ಚಿನ್ನವು ನಿರಂತರ ಏರಿಕೆ ದಾಖಲಿಸಿತ್ತು. ಈ ಮೂಲಕ ಬಂಗಾರ ಜೀವಿತಾವಽಯ ಹೊಸ ಗರಿಷ್ಠ ಮಟ್ಟವನ್ನು ತಲುಪಿತ್ತು. ಬುಧವಾರ ಫೆಬ್ರವರಿ 5 ರ ಫ್ಯೂಚರ್ ವಹಿವಾಟಿನಲ್ಲಿ 10 ಗ್ರಾಂಗೆ 1,52,862ಕ್ಕೆ ಮುಕ್ತಾಯಗೊಂಡಿತ್ತು. ಆದಾಗ್ಯೂ ಗುರುವಾರ ಇದು 10 ಗ್ರಾಂಗೆ 1,48,777 ಕ್ಕೆ ಇಳಿದಿದೆ. ಈ ಮೂಲಕ ಬಂಗಾರ ಇಂದಿನ ವಹಿವಾಟಿನಲ್ಲಿ ಸುಮಾರು 4,085ರಷ್ಟು ಇಳಿಕೆ ಕಂಡು ಮಧ್ಯಮ ವರ್ಗ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

1 min ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

1 hour ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

3 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago