ದೇಶ- ವಿದೇಶ

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ ಗಮನಾರ್ಹ ಕುಸಿತ ಕಂಡವು. ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ ವಹಿವಾಟು ಪ್ರಾರಂಭವಾದ ತಕ್ಷಣ ಎರಡೂ ಅಮೂಲ್ಯ ಲೋಹಗಳ ಬೆಲೆಯಲ್ಲಿ ಭಾರಿ ಕುಸಿತ ಕಂಡು ಬಂದಿದೆ.

ಇದು ಮಾರುಕಟ್ಟೆಯಲ್ಲಿ ಹೂಡಿಕೆದಾರರನ್ನು ಅಚ್ಚರಿಗೊಳಿಸಿತು. ಬೆಳ್ಳಿ ಪ್ರತಿ ಕೆಜಿಗೆ ಸುಮಾರು 20,000 ರೂ. ಕಡಿಮೆಯಾದರೆ, ಚಿನ್ನದ ಬೆಲೆ ಕೂಡ 10 ಗ್ರಾಂಗೆ 4,000 ರೂ.ಗಿಂತ ಹೆಚ್ಚು ಇಳಿಕೆ ದಾಖಲಿಸಿದೆ. ಬೆಳ್ಳಿ ಆರಂಭಿಕ ಹಂತದಲ್ಲಿ ತೀವ್ರವಾಗಿ ಕುಸಿತ ಕಂಡಿತು. ಬೆಳ್ಳಿ ಬುಧವಾರ ಪ್ರತಿ ಕೆಜಿಗೆ 3,25,602 ರೂ.ಗೆ ಮುಕ್ತಾಯಗೊಂಡಿತ್ತು. ಗುರುವಾರ ಬೆಳಗ್ಗೆ ಮಾರುಕಟ್ಟೆ ಆರಂಭವಾದ ತಕ್ಷಣ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 3,05,753 ರೂ.ಗೆ ಇಳಿಕೆ ದಾಖಲಿಸಿತು. ಒಂದೇ ಬಾರಿಗೆ ಪ್ರತಿ ಕೆಜಿಗೆ ಸುಮಾರು 19,849 ರಷ್ಟು ಕುಸಿತ ಕಂಡಿತು. ಇತ್ತೀಚಿನ ದಿನಗಳಲ್ಲಿ ತೀವ್ರ ಏರಿಕೆಯ ನಂತರ ಆದ ಅತಿ ದೊಡ್ಡ ಕುಸಿತವಿದು.

ಚಿನ್ನದ ಬೆಲೆಯಲ್ಲೂ ಭಾರಿ ಕುಸಿತ
ಬೆಳ್ಳಿಯ ಜೊತೆಗೆ ಚಿನ್ನದ ಬೆಲೆಗಳು ಸಹ ತೀವ್ರ ಕುಸಿತ ಕಂಡಿವೆ. ಕಳೆದ ಮೂರು ವಹಿವಾಟಿನಲ್ಲಿ ಚಿನ್ನವು ನಿರಂತರ ಏರಿಕೆ ದಾಖಲಿಸಿತ್ತು. ಈ ಮೂಲಕ ಬಂಗಾರ ಜೀವಿತಾವಽಯ ಹೊಸ ಗರಿಷ್ಠ ಮಟ್ಟವನ್ನು ತಲುಪಿತ್ತು. ಬುಧವಾರ ಫೆಬ್ರವರಿ 5 ರ ಫ್ಯೂಚರ್ ವಹಿವಾಟಿನಲ್ಲಿ 10 ಗ್ರಾಂಗೆ 1,52,862ಕ್ಕೆ ಮುಕ್ತಾಯಗೊಂಡಿತ್ತು. ಆದಾಗ್ಯೂ ಗುರುವಾರ ಇದು 10 ಗ್ರಾಂಗೆ 1,48,777 ಕ್ಕೆ ಇಳಿದಿದೆ. ಈ ಮೂಲಕ ಬಂಗಾರ ಇಂದಿನ ವಹಿವಾಟಿನಲ್ಲಿ ಸುಮಾರು 4,085ರಷ್ಟು ಇಳಿಕೆ ಕಂಡು ಮಧ್ಯಮ ವರ್ಗ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

6 mins ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

17 mins ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

1 hour ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

1 hour ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

3 hours ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

3 hours ago