ದೇಶ- ವಿದೇಶ

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ ಗಮನಾರ್ಹ ಕುಸಿತ ಕಂಡವು. ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ ವಹಿವಾಟು ಪ್ರಾರಂಭವಾದ ತಕ್ಷಣ ಎರಡೂ ಅಮೂಲ್ಯ ಲೋಹಗಳ ಬೆಲೆಯಲ್ಲಿ ಭಾರಿ ಕುಸಿತ ಕಂಡು ಬಂದಿದೆ.

ಇದು ಮಾರುಕಟ್ಟೆಯಲ್ಲಿ ಹೂಡಿಕೆದಾರರನ್ನು ಅಚ್ಚರಿಗೊಳಿಸಿತು. ಬೆಳ್ಳಿ ಪ್ರತಿ ಕೆಜಿಗೆ ಸುಮಾರು 20,000 ರೂ. ಕಡಿಮೆಯಾದರೆ, ಚಿನ್ನದ ಬೆಲೆ ಕೂಡ 10 ಗ್ರಾಂಗೆ 4,000 ರೂ.ಗಿಂತ ಹೆಚ್ಚು ಇಳಿಕೆ ದಾಖಲಿಸಿದೆ. ಬೆಳ್ಳಿ ಆರಂಭಿಕ ಹಂತದಲ್ಲಿ ತೀವ್ರವಾಗಿ ಕುಸಿತ ಕಂಡಿತು. ಬೆಳ್ಳಿ ಬುಧವಾರ ಪ್ರತಿ ಕೆಜಿಗೆ 3,25,602 ರೂ.ಗೆ ಮುಕ್ತಾಯಗೊಂಡಿತ್ತು. ಗುರುವಾರ ಬೆಳಗ್ಗೆ ಮಾರುಕಟ್ಟೆ ಆರಂಭವಾದ ತಕ್ಷಣ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 3,05,753 ರೂ.ಗೆ ಇಳಿಕೆ ದಾಖಲಿಸಿತು. ಒಂದೇ ಬಾರಿಗೆ ಪ್ರತಿ ಕೆಜಿಗೆ ಸುಮಾರು 19,849 ರಷ್ಟು ಕುಸಿತ ಕಂಡಿತು. ಇತ್ತೀಚಿನ ದಿನಗಳಲ್ಲಿ ತೀವ್ರ ಏರಿಕೆಯ ನಂತರ ಆದ ಅತಿ ದೊಡ್ಡ ಕುಸಿತವಿದು.

ಚಿನ್ನದ ಬೆಲೆಯಲ್ಲೂ ಭಾರಿ ಕುಸಿತ
ಬೆಳ್ಳಿಯ ಜೊತೆಗೆ ಚಿನ್ನದ ಬೆಲೆಗಳು ಸಹ ತೀವ್ರ ಕುಸಿತ ಕಂಡಿವೆ. ಕಳೆದ ಮೂರು ವಹಿವಾಟಿನಲ್ಲಿ ಚಿನ್ನವು ನಿರಂತರ ಏರಿಕೆ ದಾಖಲಿಸಿತ್ತು. ಈ ಮೂಲಕ ಬಂಗಾರ ಜೀವಿತಾವಽಯ ಹೊಸ ಗರಿಷ್ಠ ಮಟ್ಟವನ್ನು ತಲುಪಿತ್ತು. ಬುಧವಾರ ಫೆಬ್ರವರಿ 5 ರ ಫ್ಯೂಚರ್ ವಹಿವಾಟಿನಲ್ಲಿ 10 ಗ್ರಾಂಗೆ 1,52,862ಕ್ಕೆ ಮುಕ್ತಾಯಗೊಂಡಿತ್ತು. ಆದಾಗ್ಯೂ ಗುರುವಾರ ಇದು 10 ಗ್ರಾಂಗೆ 1,48,777 ಕ್ಕೆ ಇಳಿದಿದೆ. ಈ ಮೂಲಕ ಬಂಗಾರ ಇಂದಿನ ವಹಿವಾಟಿನಲ್ಲಿ ಸುಮಾರು 4,085ರಷ್ಟು ಇಳಿಕೆ ಕಂಡು ಮಧ್ಯಮ ವರ್ಗ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago