ಹೊಸದಿಲ್ಲಿ: ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ ಹಾಗೇ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆಗೆ ಚುನಾವಣೆ ನಡೆಸುವ ʼಒಂದು ದೇಶ ಒಂದು ಚುನಾವಣೆʼ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಈ ಮಸೂದೆಯು ಸಂವಿಧಾನ ಹಾಗೂ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದದ್ದು. ಈ ಮಸೂದೆಯಿಂದ ರಾಜ್ಯಗಳಿಗೆ ಇರುವ ಸ್ವಾಯತ್ತತೆಯೂ ಕೇಂದ್ರದ ಪಾಲಾಗುತ್ತದೆ ಎಂದು ಟೀಕಿಸಿದ್ದಾರೆ.
ಏಕಕಾಲಕ್ಕೆ ಚುನಾವಣೆ ನಡೆಸುವ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದ ಸಂದರ್ಭದಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಪ್ರಿಯಾಂಕಾ ಮಾತನಾಡಿದರು.
ಸಂವಿಧಾನ(121ನೇ ತಿದ್ದುಪಡಿ) ಮಸೂದೆ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮಸೂದೆಯು ಒಕ್ಕೂಟ ರಚನೆಗೆ ವಿರುದ್ಧವಾದದ್ದು ಎಂದು ಪ್ರತಿಪಕ್ಷಗಳು ಮಸೂದೆ ವಿರೋಧಿಸಿದವು. ಮತ ವಿಭಜನೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಾಗ ಈ ಮಸೂದೆಗಳನ್ನು ಮಂಡಿಸಲಾಯಿತು.
ಹೊಸ ಸಂಸʻತ್ ಭವನದಲ್ಲಿ ನಡೆದ ಲೋಕಸಭಾ ಕಲಾಪದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಗಿದೆ. ಜೊತೆಯಲ್ಲಿ ಚೀಟಿಯನ್ನು ಎಣಿಸಲಾಗಿದೆ. ಇದರಲ್ಲಿ 269 ಸಂಸದರು ಮಸೂದೆ ಪರವಾಗಿ ಮತ ಚಲಾಯಿಸಿದರೆ, 198 ಸಂಸದರು ವಿರುದ್ಧವಾಗಿ ಮತ ಚಲಾಯಿಸಿದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…