ಹೊಸದಿಲ್ಲಿ: ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ ಹಾಗೇ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆಗೆ ಚುನಾವಣೆ ನಡೆಸುವ ʼಒಂದು ದೇಶ ಒಂದು ಚುನಾವಣೆʼ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಈ ಮಸೂದೆಯು ಸಂವಿಧಾನ ಹಾಗೂ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದದ್ದು. ಈ ಮಸೂದೆಯಿಂದ ರಾಜ್ಯಗಳಿಗೆ ಇರುವ ಸ್ವಾಯತ್ತತೆಯೂ ಕೇಂದ್ರದ ಪಾಲಾಗುತ್ತದೆ ಎಂದು ಟೀಕಿಸಿದ್ದಾರೆ.
ಏಕಕಾಲಕ್ಕೆ ಚುನಾವಣೆ ನಡೆಸುವ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದ ಸಂದರ್ಭದಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಪ್ರಿಯಾಂಕಾ ಮಾತನಾಡಿದರು.
ಸಂವಿಧಾನ(121ನೇ ತಿದ್ದುಪಡಿ) ಮಸೂದೆ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮಸೂದೆಯು ಒಕ್ಕೂಟ ರಚನೆಗೆ ವಿರುದ್ಧವಾದದ್ದು ಎಂದು ಪ್ರತಿಪಕ್ಷಗಳು ಮಸೂದೆ ವಿರೋಧಿಸಿದವು. ಮತ ವಿಭಜನೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಾಗ ಈ ಮಸೂದೆಗಳನ್ನು ಮಂಡಿಸಲಾಯಿತು.
ಹೊಸ ಸಂಸʻತ್ ಭವನದಲ್ಲಿ ನಡೆದ ಲೋಕಸಭಾ ಕಲಾಪದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಗಿದೆ. ಜೊತೆಯಲ್ಲಿ ಚೀಟಿಯನ್ನು ಎಣಿಸಲಾಗಿದೆ. ಇದರಲ್ಲಿ 269 ಸಂಸದರು ಮಸೂದೆ ಪರವಾಗಿ ಮತ ಚಲಾಯಿಸಿದರೆ, 198 ಸಂಸದರು ವಿರುದ್ಧವಾಗಿ ಮತ ಚಲಾಯಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…
ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…