ದೇಶ- ವಿದೇಶ

ಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ ನಿಧನ

ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಯಚಂದ್ರನ್‌ ಅವರು, ತ್ರಿಶೂರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪ್ರೀತಿ, ಹಂಬಲ, ಭಕ್ತಿ ಸೇರಿದಂತೆ ಮುಂತಾದ ಪ್ರತಿಯೊಂದು ಭಾವನೆಯನ್ನು ತಮ್ಮ ಗಾಯನದ ಮೂಲಕ ಜನರನ್ನು ರಂಜಿಸುತ್ತಾ ಬಂದಿದ್ದರು.

ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ 16,000ಕ್ಕೂ ಹೆಚ್ಚು ಹಾಡುಗಳಿಗೆ ತಮ್ಮ ಧ್ವನಿ ನೀಡಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅತ್ಯಂತ ಪ್ರಸಿದ್ಧ ಧ್ವನಿಗಳಲ್ಲಿ ಒಂದಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಮಂದಾರ ಪುಷ್ಪವೂ ನೀನು, ಭೂಮಿ ತಾಯಾಣೆ ನೀ ಇಷ್ಟ ಕಣೆ, ಹಿಂದೂಸ್ತಾನವು ಎಂದೂ ಮರೆಯದ, ಕನ್ನಡ ನಾಡಿನ ಕರಾವಳಿ, ನನ್ನವರು ಯಾರೂ ಇಲ್ಲ. ಯಾರಿಗೆ ಯಾರೂ ಇಲ್ಲ. ಕಾಲ ಮತ್ತೊಮ್ಮೆ ನಮಗಾಗಿ ಬಂತು. ಹೀಗೆ ಹಲವಾರು ಕನ್ನಡದ ಸುಪ್ರಸಿದ್ಧ ಗೀತೆಗಳನ್ನು ಹಾಡಿ ಜನಪ್ರಿಯತೆ ಗಳಿಸಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago